<p><strong>ಶ್ರೀನಗರ</strong>: ಇದೇ ಮೊದಲ ಬಾರಿಗೆ ಕಾಶ್ಮೀರಿ ಮತ್ತು ಕನ್ನಡ ಭಾಷೆಯಲ್ಲಿ ಹರಮುಖ ಎನ್ನುವ ಚಲನಚಿತ್ರ ನಿರ್ಮಾಣವಾಗಿದ್ದು, ಜೂನ್18ರಂದು ಜಮ್ಮು ಮತ್ತು ಕಾಶ್ಮೀರದ ಐನಾಕ್ಸ್ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ.</p><p>ಸೋಮವಾರ ನಡೆದ ಸಮಾರಂಭದಲ್ಲಿ ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಆಯಶ್ ಆರಿಫ್ ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.</p><p>ಈ ಚಿತ್ರದ ಶೀರ್ಷಿಕೆಯು ಮಧ್ಯ ಕಾಶ್ಮೀರದ ಗಂಡೇರ್ಬಲ್ ಜಿಲ್ಲೆಯಲ್ಲಿ ದಕ್ಷಿಣಕ್ಕೆ ಸಿಂಧೂ ನದಿ ಮತ್ತು ಉತ್ತರಕ್ಕೆ ಕಿಶನ್ಗಂಗಾ ನದಿಯ ನಡುವೆ ಇರುವ ಹರಮುಖ ಪರ್ವತದಿಂದ ಪ್ರೇರಿತವಾಗಿದೆ. ಇದನ್ನು ಹಿಂದೂ ಧರ್ಮದಲ್ಲಿ ಪವಿತ್ರವೆಂದು ಪರಿಗಣಿಸಲಾಗಿದೆ. ಹೀಗಾಗಿ ಈ ಹೆಸರನ್ನು ಇಡಲಾಗಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.</p><p>16 ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳನ್ನು ಗೆದ್ದಿರುವ ಹಿರಿಯ ಚಲನಚಿತ್ರ ನಿರ್ಮಾಪಕ ಮತ್ತು ನಟ ಟಿ. ಎಸ್. ನಾಗಾಭರಣ ಸಹ ಪಾತ್ರವರ್ಗದ ಭಾಗವಾಗಿದ್ದಾರೆ.</p><p>ಈ ಚಿತ್ರವು ಕಾಶ್ಮೀರ ಮತ್ತು ಕರ್ನಾಟಕದ ನಡುವಿನ ಒಂದು ಕನಸು, ಸೇತುವೆ ಮತ್ತು ಬಂಧವಾಗಿದೆ. ಗಡಿಗಳನ್ನು ಮೀರಿದ ಸ್ನೇಹದ ಸಂದೇಶವನ್ನು ಇದು ಹೊಂದಿದೆ ಎಂದು ಆರಿಫ್ ಬಣ್ಣಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಇದೇ ಮೊದಲ ಬಾರಿಗೆ ಕಾಶ್ಮೀರಿ ಮತ್ತು ಕನ್ನಡ ಭಾಷೆಯಲ್ಲಿ ಹರಮುಖ ಎನ್ನುವ ಚಲನಚಿತ್ರ ನಿರ್ಮಾಣವಾಗಿದ್ದು, ಜೂನ್18ರಂದು ಜಮ್ಮು ಮತ್ತು ಕಾಶ್ಮೀರದ ಐನಾಕ್ಸ್ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ.</p><p>ಸೋಮವಾರ ನಡೆದ ಸಮಾರಂಭದಲ್ಲಿ ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಆಯಶ್ ಆರಿಫ್ ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.</p><p>ಈ ಚಿತ್ರದ ಶೀರ್ಷಿಕೆಯು ಮಧ್ಯ ಕಾಶ್ಮೀರದ ಗಂಡೇರ್ಬಲ್ ಜಿಲ್ಲೆಯಲ್ಲಿ ದಕ್ಷಿಣಕ್ಕೆ ಸಿಂಧೂ ನದಿ ಮತ್ತು ಉತ್ತರಕ್ಕೆ ಕಿಶನ್ಗಂಗಾ ನದಿಯ ನಡುವೆ ಇರುವ ಹರಮುಖ ಪರ್ವತದಿಂದ ಪ್ರೇರಿತವಾಗಿದೆ. ಇದನ್ನು ಹಿಂದೂ ಧರ್ಮದಲ್ಲಿ ಪವಿತ್ರವೆಂದು ಪರಿಗಣಿಸಲಾಗಿದೆ. ಹೀಗಾಗಿ ಈ ಹೆಸರನ್ನು ಇಡಲಾಗಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.</p><p>16 ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳನ್ನು ಗೆದ್ದಿರುವ ಹಿರಿಯ ಚಲನಚಿತ್ರ ನಿರ್ಮಾಪಕ ಮತ್ತು ನಟ ಟಿ. ಎಸ್. ನಾಗಾಭರಣ ಸಹ ಪಾತ್ರವರ್ಗದ ಭಾಗವಾಗಿದ್ದಾರೆ.</p><p>ಈ ಚಿತ್ರವು ಕಾಶ್ಮೀರ ಮತ್ತು ಕರ್ನಾಟಕದ ನಡುವಿನ ಒಂದು ಕನಸು, ಸೇತುವೆ ಮತ್ತು ಬಂಧವಾಗಿದೆ. ಗಡಿಗಳನ್ನು ಮೀರಿದ ಸ್ನೇಹದ ಸಂದೇಶವನ್ನು ಇದು ಹೊಂದಿದೆ ಎಂದು ಆರಿಫ್ ಬಣ್ಣಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>