ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರ್ಷ ಹತ್ಯೆ ಪ್ರಕರಣ: ನಟಿಯರಾದ  ರಮ್ಯಾ, ಕಂಗನಾ, ರವೀನಾ, ಮಾಳವಿಕಾ ಸಂತಾಪ

Last Updated 22 ಫೆಬ್ರುವರಿ 2022, 12:08 IST
ಅಕ್ಷರ ಗಾತ್ರ

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತನ ಹರ್ಷ ಅವರ ಸಾವಿಗೆ ಭಾರತದ ಸಿನಿಮಾರಂಗದ ಕಲಾವಿದರು ಕಂಬನಿ ಮಿಡಿದಿದ್ದಾರೆ.

ಹರ್ಷ ಅವರ ಹತ್ಯೆಯನ್ನು ಖಂಡಿಸಿರುವ ಕಲಾವಿದರು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಬಾಲಿವುಡ್ ನಟಿ ಕಂಗನಾ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

ನಟಿ ರವೀನಾ ಟಂಡನ್‌ ಹರ್ಷ ಅವರ ಹತ್ಯೆಯನ್ನು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು ‘ಹರ್ಷ ಅವರ ಸಾವಿಗೆ ನ್ಯಾಯ ಸಿಗಬೇಕು’ ಎಂದು ಬರೆದುಕೊಂಡಿದ್ದಾರೆ.

ಚಂದನವನದ ನಟಿ ರಮ್ಯಾ, ’ಒಡೆದು ಆಳುವ ರಾಜಕಾರಣಕ್ಕೆ ಇನ್ನೆಷ್ಟು ಜನರನ್ನು ನಾವು ಕಳೆದುಕೊಳ್ಳಬೇಕು? ಶಾಂತಿ, ಏಕತೆ ಹಾಗೂ ಸಾಮರಸ್ಯ ಮಾತ್ರ ಮುಂದಿನ ಆಯ್ಕೆ’ ಎಂದು ಟ್ವೀಟ್‌ ಮಾಡಿದ್ದಾರೆ.

ನಟಿ ಹಾಗೂ ಬಿಜೆಪಿ ನಾಯಕಿ ಮಾಳವಿಕ ಅವರು ಕೂಡ ಹರ್ಷನ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT