<p><strong>ನವದೆಹಲಿ</strong>: ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನ ಕುರಿತಂತೆ ಅಕ್ಷಯ್ ಕುಮಾರ್, ಸನ್ನಿ ದೇವಲ್, ರಿತೇಶ್ ದೇಶಮುಖ್, ಕಂಗನಾ ರನೌತ್ ಸೇರಿದಂತೆ ಬಾಲಿವುಡ್ ಸೆಲೆಬ್ರಿಟಿಗಳು ಆಘಾತ ವ್ಯಕ್ತಪಡಿಸಿದ್ದಾರೆ.</p><p>ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿದ್ದ ಎಐ 171 ಏರ್ ಇಂಡಿಯಾ ವಿಮಾನವು ಟೇಕಾಫ್ ಬಳಿಕ ವಿಮಾನ ನಿಲ್ದಾಣದ ಹೊರವಲಯದಲ್ಲಿ ಪತನವಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು.</p><p>‘ಏರ್ ಇಂಡಿಯಾ ವಿಮಾನ ಪತನದಿಂದ ಆಘಾತವಾಗಿದ್ದು, ಮಾತೇ ಬರುತ್ತಿಲ್ಲ. ಪ್ರಯಾಣಿಕರು ಸುರಕ್ಷಿತವಾಗಿರಲಿ ಎಂದು ಈ ಸಮಯದಲ್ಲಿ ಪ್ರಾರ್ಥನೆ ಮಾತ್ರ ಮಾಡಬಹುದು ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.</p>. <p>ಅಹಮದಾಬಾದ್ನಲ್ಲಿ ನಡೆದ ವಿಮಾನ ಅಪಘಾತದ ಸುದ್ದಿಯಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ ಎಂದು ಸನ್ನಿ ದೇವಲ್ ಹೇಳಿದ್ದಾರೆ.</p><p>ಅಪಘಾತದಲ್ಲಿ ಮೃತ ಪ್ರಯಾಣಿಕರು, ಅವರ ಕುಟುಂಬ ಸದಸ್ಯರು ಮತ್ತು ಅದರಿಂದ ಹಾನಿಗೊಳಗಾದ ಎಲ್ಲರಿಗೂ ನನ್ನ ಹೃದಯ ಮಿಡಿಯುತ್ತಿದೆ. ಇಂತಹ ಕಠಿಣ ಸಂದರ್ಭದಲ್ಲಿ ಅವರೆಲ್ಲರ ಪರವಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.</p><p>ಈ ದುರಂತದಲ್ಲಿ ಮೃತರ ಕುಟುಂಬ ಸದಸ್ಯರ ನೋವು ೂಹಿಸಲೂ ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ನೋವು ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ನಟಿ ಪರಿಣಿತಿ ಚೋಪ್ರಾ ಬರೆದುಕೊಂಡಿದ್ದಾರೆ.</p><p>ವಿಮಾನ ಅಪಘಾತದ ಬಗ್ಗೆ ತಿಳಿದು ಆಘಾತಕ್ಕೊಳಗಾಗಿದ್ದೇನೆ. ಇದು ಹೃದಯ ವಿದ್ರಾವಕ ಎಂದು ರಿತೇಶ್ ಹೇಳಿದ್ದಾರೆ.</p><p>ನಟರಾದ ರಣದೀಪ್ ಹೂಡಾ ಮತ್ತು ಸೋನು ಸೂದ್ ಸಹ ತಮ್ಮ ಸಂತಾಪ ಸೂಚಿಸಿದ್ದಾರೆ.</p><p>ಅಹಮದಾಬಾದ್ನಲ್ಲಿ ನಡೆದ ಭೀಕರ ವಿಮಾನ ಅಪಘಾತದ ಬಗ್ಗೆ ಕೇಳಿ ಹೃದಯ ಒಡೆದಿದೆ. ಸಂತ್ರಸ್ತರ ಪರವಾಗಿ ನನ್ನ ಪ್ರಾರ್ಥನೆ ಇವೆ. ಬದುಕುಳಿದವರಿಗೆ ಮತ್ತು ರಕ್ಷಣಾ ತಂಡಗಳಿಗೆ ದೇವರು ಶಕ್ತಿ ನೀಡಲಿ ಎಂದು ಆಶಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ಈ ದುಃಖದ ನೋವು ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ರಣದೀಪ್ ಹೇಳಿದ್ದಾರೆ.</p><p>ಅಹಮದಾಬಾದ್ನ ವಿಮಾನ ಅಪಘಾತವು ಅತ್ಯಂತ ದುರಂತದ ಮತ್ತು ನೋವಿನಿಂದ ಕೂಡಿದ ಸುದ್ದಿಯಾಗಿದೆ. ಎಲ್ಲರ ಸುರಕ್ಷತೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳಿಗೆ ದೇವರು ನೋವು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ನಟಿ, ರಾಜಕಾರಣಿ ಕಂಗನಾ ರನೌತ್ ಹೇಳಿದ್ದಾರೆ.</p> .Breaking News: 200ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಅಹಮದಾಬಾದ್ನಲ್ಲಿ ಪತನ.Ahmedabad Plane Crash | ಇದು ಪದಗಳಿಗೂ ಮೀರಿದ ಹೃದಯವಿದ್ರಾವಕ ದುರಂತ: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನ ಕುರಿತಂತೆ ಅಕ್ಷಯ್ ಕುಮಾರ್, ಸನ್ನಿ ದೇವಲ್, ರಿತೇಶ್ ದೇಶಮುಖ್, ಕಂಗನಾ ರನೌತ್ ಸೇರಿದಂತೆ ಬಾಲಿವುಡ್ ಸೆಲೆಬ್ರಿಟಿಗಳು ಆಘಾತ ವ್ಯಕ್ತಪಡಿಸಿದ್ದಾರೆ.</p><p>ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿದ್ದ ಎಐ 171 ಏರ್ ಇಂಡಿಯಾ ವಿಮಾನವು ಟೇಕಾಫ್ ಬಳಿಕ ವಿಮಾನ ನಿಲ್ದಾಣದ ಹೊರವಲಯದಲ್ಲಿ ಪತನವಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು.</p><p>‘ಏರ್ ಇಂಡಿಯಾ ವಿಮಾನ ಪತನದಿಂದ ಆಘಾತವಾಗಿದ್ದು, ಮಾತೇ ಬರುತ್ತಿಲ್ಲ. ಪ್ರಯಾಣಿಕರು ಸುರಕ್ಷಿತವಾಗಿರಲಿ ಎಂದು ಈ ಸಮಯದಲ್ಲಿ ಪ್ರಾರ್ಥನೆ ಮಾತ್ರ ಮಾಡಬಹುದು ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.</p>. <p>ಅಹಮದಾಬಾದ್ನಲ್ಲಿ ನಡೆದ ವಿಮಾನ ಅಪಘಾತದ ಸುದ್ದಿಯಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ ಎಂದು ಸನ್ನಿ ದೇವಲ್ ಹೇಳಿದ್ದಾರೆ.</p><p>ಅಪಘಾತದಲ್ಲಿ ಮೃತ ಪ್ರಯಾಣಿಕರು, ಅವರ ಕುಟುಂಬ ಸದಸ್ಯರು ಮತ್ತು ಅದರಿಂದ ಹಾನಿಗೊಳಗಾದ ಎಲ್ಲರಿಗೂ ನನ್ನ ಹೃದಯ ಮಿಡಿಯುತ್ತಿದೆ. ಇಂತಹ ಕಠಿಣ ಸಂದರ್ಭದಲ್ಲಿ ಅವರೆಲ್ಲರ ಪರವಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.</p><p>ಈ ದುರಂತದಲ್ಲಿ ಮೃತರ ಕುಟುಂಬ ಸದಸ್ಯರ ನೋವು ೂಹಿಸಲೂ ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ನೋವು ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ನಟಿ ಪರಿಣಿತಿ ಚೋಪ್ರಾ ಬರೆದುಕೊಂಡಿದ್ದಾರೆ.</p><p>ವಿಮಾನ ಅಪಘಾತದ ಬಗ್ಗೆ ತಿಳಿದು ಆಘಾತಕ್ಕೊಳಗಾಗಿದ್ದೇನೆ. ಇದು ಹೃದಯ ವಿದ್ರಾವಕ ಎಂದು ರಿತೇಶ್ ಹೇಳಿದ್ದಾರೆ.</p><p>ನಟರಾದ ರಣದೀಪ್ ಹೂಡಾ ಮತ್ತು ಸೋನು ಸೂದ್ ಸಹ ತಮ್ಮ ಸಂತಾಪ ಸೂಚಿಸಿದ್ದಾರೆ.</p><p>ಅಹಮದಾಬಾದ್ನಲ್ಲಿ ನಡೆದ ಭೀಕರ ವಿಮಾನ ಅಪಘಾತದ ಬಗ್ಗೆ ಕೇಳಿ ಹೃದಯ ಒಡೆದಿದೆ. ಸಂತ್ರಸ್ತರ ಪರವಾಗಿ ನನ್ನ ಪ್ರಾರ್ಥನೆ ಇವೆ. ಬದುಕುಳಿದವರಿಗೆ ಮತ್ತು ರಕ್ಷಣಾ ತಂಡಗಳಿಗೆ ದೇವರು ಶಕ್ತಿ ನೀಡಲಿ ಎಂದು ಆಶಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ಈ ದುಃಖದ ನೋವು ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ರಣದೀಪ್ ಹೇಳಿದ್ದಾರೆ.</p><p>ಅಹಮದಾಬಾದ್ನ ವಿಮಾನ ಅಪಘಾತವು ಅತ್ಯಂತ ದುರಂತದ ಮತ್ತು ನೋವಿನಿಂದ ಕೂಡಿದ ಸುದ್ದಿಯಾಗಿದೆ. ಎಲ್ಲರ ಸುರಕ್ಷತೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳಿಗೆ ದೇವರು ನೋವು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ನಟಿ, ರಾಜಕಾರಣಿ ಕಂಗನಾ ರನೌತ್ ಹೇಳಿದ್ದಾರೆ.</p> .Breaking News: 200ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಅಹಮದಾಬಾದ್ನಲ್ಲಿ ಪತನ.Ahmedabad Plane Crash | ಇದು ಪದಗಳಿಗೂ ಮೀರಿದ ಹೃದಯವಿದ್ರಾವಕ ದುರಂತ: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>