<p>ನಿರ್ದೇಶಕ ಎಸ್.ನಾರಾಯಣ್ ಮತ್ತೆ ನಟನೆಗಿಳಿದಿದ್ದಾರೆ. ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಹಲೋ ಸರ್’ ಚಿತ್ರ ಬಿಡುಗಡೆ ಸಿದ್ಧವಿದೆ. ನಾರಾಯಣ್ ಈ ಹಿಂದೆ ‘ಕುರಿಗಳು ಸಾರ್ ಕುರಿಗಳು’ ಸೇರಿದಂತೆ ಕೆಲ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚಿದ್ದರು. ಕೆ.ಶಂಕರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.</p>.<p>‘ಸಮಾಜದಲ್ಲಿ ಅಪರಾಧ ಕೃತ್ಯ ಎಸಗಿ, ಹಣ ಬಲ, ಅಧಿಕಾರ ಬಳಸಿಕೊಳ್ಳುವವರ ವಿರುದ್ಧ ಹೋರಾಡುವ ಕಥೆ. ಪ್ರಾಮಾಣಿಕರು ಹಾಗೂ ರಾಜಕಾರಣಿಗಳ ನಡುವಿನ ಸಮರವಿದು. ಸಮಾಜದ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿರುವವರ ವಿರುದ್ದ ಯುವಕನೊಬ್ಬ ಹೋರಾಡುತ್ತಾನೆ. ಯಾಕೆ ಆ ಹೋರಾಟ? ಅದು ಎಲ್ಲಿಗೆ ತಲುಪತ್ತದೆ ಎಂಬುದೇ ಚಿತ್ರಕಥೆ. ಮಂಗಳೂರು, ಮಂಡ್ಯ, ಬೆಂಗಳೂರು ಮತ್ತು ಹೈದರಾಬಾದ್ ಸುತ್ತಮುತ್ತ ಸುಮಾರು 40 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಚಿತ್ರವೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಆಗಸ್ಟ್ ತಿಂಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ’ ಎನ್ನುತ್ತಾರೆ ನಿರ್ದೇಶಕರು.</p>.<p>ಕನ್ನಡ, ತೆಲಗು, ತಮಿಳಿನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ. ಚಿತ್ರದ ನಾಯಕನಾಗಿ ರಾಜಬಾಲ ನಟಿಸಿದ್ದಾರೆ. ಸ್ವಾತಿ ಲಿಂಗರಾಜ್ ನಾಯಕಿ. ಎಲ್. ಮಂಜುನಾಥ್, ಎಚ್.ಪಿ.ಮಹೇಶ್ ಮತ್ತು ವೆಂಕಟೇಶ್ ಬಂಡವಾಳ ಹೂಡಿದ್ದಾರೆ. ಎಂ.ಎನ್.ಕೃಪಾಕರ್ ಸಂಗೀತ, ಚಂದ್ರು ಸೊಂಡೇಕೊಪ್ಪ, ಸೂರ್ಯೋದಯ ಅವರ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ. ಕೆ.ಶಿವಣ್ಣ, ಕಿಲ್ಲರ್ ವೆಂಕಟೇಶ್, ರಮಾನಂದ್, ಬೇಬಿ ಎಸ್ ಪವಿತ್ರ ತಾರಾಗಣದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಿರ್ದೇಶಕ ಎಸ್.ನಾರಾಯಣ್ ಮತ್ತೆ ನಟನೆಗಿಳಿದಿದ್ದಾರೆ. ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಹಲೋ ಸರ್’ ಚಿತ್ರ ಬಿಡುಗಡೆ ಸಿದ್ಧವಿದೆ. ನಾರಾಯಣ್ ಈ ಹಿಂದೆ ‘ಕುರಿಗಳು ಸಾರ್ ಕುರಿಗಳು’ ಸೇರಿದಂತೆ ಕೆಲ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚಿದ್ದರು. ಕೆ.ಶಂಕರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.</p>.<p>‘ಸಮಾಜದಲ್ಲಿ ಅಪರಾಧ ಕೃತ್ಯ ಎಸಗಿ, ಹಣ ಬಲ, ಅಧಿಕಾರ ಬಳಸಿಕೊಳ್ಳುವವರ ವಿರುದ್ಧ ಹೋರಾಡುವ ಕಥೆ. ಪ್ರಾಮಾಣಿಕರು ಹಾಗೂ ರಾಜಕಾರಣಿಗಳ ನಡುವಿನ ಸಮರವಿದು. ಸಮಾಜದ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿರುವವರ ವಿರುದ್ದ ಯುವಕನೊಬ್ಬ ಹೋರಾಡುತ್ತಾನೆ. ಯಾಕೆ ಆ ಹೋರಾಟ? ಅದು ಎಲ್ಲಿಗೆ ತಲುಪತ್ತದೆ ಎಂಬುದೇ ಚಿತ್ರಕಥೆ. ಮಂಗಳೂರು, ಮಂಡ್ಯ, ಬೆಂಗಳೂರು ಮತ್ತು ಹೈದರಾಬಾದ್ ಸುತ್ತಮುತ್ತ ಸುಮಾರು 40 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಚಿತ್ರವೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಆಗಸ್ಟ್ ತಿಂಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ’ ಎನ್ನುತ್ತಾರೆ ನಿರ್ದೇಶಕರು.</p>.<p>ಕನ್ನಡ, ತೆಲಗು, ತಮಿಳಿನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ. ಚಿತ್ರದ ನಾಯಕನಾಗಿ ರಾಜಬಾಲ ನಟಿಸಿದ್ದಾರೆ. ಸ್ವಾತಿ ಲಿಂಗರಾಜ್ ನಾಯಕಿ. ಎಲ್. ಮಂಜುನಾಥ್, ಎಚ್.ಪಿ.ಮಹೇಶ್ ಮತ್ತು ವೆಂಕಟೇಶ್ ಬಂಡವಾಳ ಹೂಡಿದ್ದಾರೆ. ಎಂ.ಎನ್.ಕೃಪಾಕರ್ ಸಂಗೀತ, ಚಂದ್ರು ಸೊಂಡೇಕೊಪ್ಪ, ಸೂರ್ಯೋದಯ ಅವರ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ. ಕೆ.ಶಿವಣ್ಣ, ಕಿಲ್ಲರ್ ವೆಂಕಟೇಶ್, ರಮಾನಂದ್, ಬೇಬಿ ಎಸ್ ಪವಿತ್ರ ತಾರಾಗಣದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>