ಹೊಂಬಾಳೆ ಫಿಲ್ಮ್ಸ್ನ ಮತ್ತೊಂದು ಅದ್ದೂರಿ ಚಿತ್ರ ‘ಬಘೀರ’ ಸೆಟ್ಟೇರಿದೆ. ಡಾ.ಸೂರಿ ಚಿತ್ರಕಥೆ, ನಿರ್ದೇಶನದ ಈ ಚಿತ್ರಕ್ಕೆಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು.ಈ ಚಿತ್ರಕ್ಕೆ ಶ್ರೀಮುರಳಿ ನಾಯಕ. ಚಿತ್ರದ ಮೊದಲ ದೃಶ್ಯಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಹೋದರ ಮಂಜುನಾಥ್ ಆರಂಭ ಫಲಕ ತೋರಿದರು. ನಿರ್ದೇಶಕ ಸೂರಿ ಅವರ ತಾಯಿ ಸರೋಜಾಅವರು ಕ್ಯಾಮೆರಾ ಚಾಲನೆ ಮಾಡಿದರು. ಮೇ ಕೊನೆಯ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.
ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಎ.ಜೆ. ಶೆಟ್ಟಿ ಛಾಯಾಗ್ರಹಣ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ರಂಗಾಯಣ ರಘು, ಅಚ್ಯುತಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.