ಸರ್ಕಾರಿ ವ್ಯವಸ್ಥೆಯೊಳಗಿನ ಭ್ರಷ್ಟಾಚಾರದ ವಿರುದ್ಧ ಪ್ರಬಲ ಧ್ವನಿ ಎತ್ತಿದ ಚಿತ್ರವಿದು. ಕೊನೆಗೂ ಒಂದು ಹೊಸ ಭರವಸೆಯ ಆಶಾಕಿರಣ ಮೂಡಿಸುವ ಆಶಯದೊಂದಿಗೆ ಕತೆ ಕೊನೆಗೊಳ್ಳುತ್ತದೆ ಎಂದಿದೆ ಚಿತ್ರತಂಡ. ಗೋಲ್ಡಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿವರ್ಷಾ ಸಂಜೀವ್ ಈ ಚಿತ್ರ ನಿರ್ಮಿಸಿದ್ದಾರೆ. ಶ್ವೇತಾ ಶ್ರೀವಾಸ್ತವ್, ಸುಮಲತಾ ಅಂಬರೀಶ್, ಪ್ರಕಾಶ್ ಬೆಳವಾಡಿ, ಗೋಪಾಲಕೃಷ್ಣ ದೇಶಪಾಂಡೆ ತಾರಾಗಣದಲ್ಲಿದ್ದಾರೆ.