<p>ಸಾಹಸ ನಿರ್ದೇಶಕ ಕೌರವ್ ವೆಂಕಟೇಶ್ ನಾಯಕರಾಗಲು ಸಿದ್ಧರಾಗಿದ್ದಾರೆ. ಅವರ ನಟನೆಯ ‘ಒಂದು ಸುಂದರ ದೆವ್ವದ ಕಥೆ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಕಪಿಲ್ ಈ ಚಿತ್ರದ ನಿರ್ದೇಶಕ. ನೃತ್ಯ ನಿರ್ದೇಶಕರೂ ಆಗಿರುವ ಕಪಿಲ್ ಈ ಹಿಂದೆ ‘ದಾಸರಹಳ್ಳಿ’, ‘ದೇವದೂತ’ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇದು ಅವರ ನಿರ್ದೇಶನದ ಹತ್ತನೇ ಚಿತ್ರ.</p>.<p>‘ಜೂನ್ ಅಂತ್ಯಕ್ಕೆ ಬೆಂಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ಮಾಡಲಾಗುವುದು. ಆರು ಜನ ಪ್ರತಿಭಾವಂತ ಹೆಣ್ಣುಮಕ್ಕಳು ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಕೂಡಿಟ್ಟ ಹಣವನ್ನು ಮೋಸದಿಂದ ಕಳೆದುಕೊಳ್ಳುತ್ತಾರೆ. ಅದೇ ಕಾಲೋನಿಯಲ್ಲಿ ಕಾವಲುಗಾರನಾಗಿ ಕೆಲಸ ಮಾಡುವ ನಾಯಕ ಈ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುತ್ತಾನೆ. ಹೇಗೆ ನ್ಯಾಯ ಕೊಡಿಸುತ್ತಾನೆ, ದೆವ್ವ ಹೇಗೆ ಬರುತ್ತದೆ ಎಂಬುದೇ ಚಿತ್ರಕಥೆ’ ಎಂದರು ನಿರ್ದೇಶಕರು.</p>.<p>ಶೋಭಾವತಿ ಕಪಿಲ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಯಿಕೃಷ್ಣ ಹೆಬ್ಬಾಳ ಅವರ ಚಿತ್ರಕಥೆ, ಸಂಭಾಷಣೆ, ಹರ್ಷ ಕೊಗೋಡ್ ಸಂಗೀತ, ಶಂಕರ್ ಆರಾಧ್ಯ ಛಾಯಾಚಿತ್ರಗ್ರಹಣ, ವಿನಯ್ ಜಿ. ಆಲೂರು ಸಂಕಲನವಿದೆ. ಕೆ.ಟಿ. ಮುನಿರಾಜ್, ಆರ್.ಲಕ್ಷ್ಮೀನಾರಾಯಣ ಗೌಡ, ಗುರುಪ್ರಸಾದ್ ಮುಂತಾದವರು ಚಿತ್ರದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಹಸ ನಿರ್ದೇಶಕ ಕೌರವ್ ವೆಂಕಟೇಶ್ ನಾಯಕರಾಗಲು ಸಿದ್ಧರಾಗಿದ್ದಾರೆ. ಅವರ ನಟನೆಯ ‘ಒಂದು ಸುಂದರ ದೆವ್ವದ ಕಥೆ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಕಪಿಲ್ ಈ ಚಿತ್ರದ ನಿರ್ದೇಶಕ. ನೃತ್ಯ ನಿರ್ದೇಶಕರೂ ಆಗಿರುವ ಕಪಿಲ್ ಈ ಹಿಂದೆ ‘ದಾಸರಹಳ್ಳಿ’, ‘ದೇವದೂತ’ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇದು ಅವರ ನಿರ್ದೇಶನದ ಹತ್ತನೇ ಚಿತ್ರ.</p>.<p>‘ಜೂನ್ ಅಂತ್ಯಕ್ಕೆ ಬೆಂಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ಮಾಡಲಾಗುವುದು. ಆರು ಜನ ಪ್ರತಿಭಾವಂತ ಹೆಣ್ಣುಮಕ್ಕಳು ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಕೂಡಿಟ್ಟ ಹಣವನ್ನು ಮೋಸದಿಂದ ಕಳೆದುಕೊಳ್ಳುತ್ತಾರೆ. ಅದೇ ಕಾಲೋನಿಯಲ್ಲಿ ಕಾವಲುಗಾರನಾಗಿ ಕೆಲಸ ಮಾಡುವ ನಾಯಕ ಈ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುತ್ತಾನೆ. ಹೇಗೆ ನ್ಯಾಯ ಕೊಡಿಸುತ್ತಾನೆ, ದೆವ್ವ ಹೇಗೆ ಬರುತ್ತದೆ ಎಂಬುದೇ ಚಿತ್ರಕಥೆ’ ಎಂದರು ನಿರ್ದೇಶಕರು.</p>.<p>ಶೋಭಾವತಿ ಕಪಿಲ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಯಿಕೃಷ್ಣ ಹೆಬ್ಬಾಳ ಅವರ ಚಿತ್ರಕಥೆ, ಸಂಭಾಷಣೆ, ಹರ್ಷ ಕೊಗೋಡ್ ಸಂಗೀತ, ಶಂಕರ್ ಆರಾಧ್ಯ ಛಾಯಾಚಿತ್ರಗ್ರಹಣ, ವಿನಯ್ ಜಿ. ಆಲೂರು ಸಂಕಲನವಿದೆ. ಕೆ.ಟಿ. ಮುನಿರಾಜ್, ಆರ್.ಲಕ್ಷ್ಮೀನಾರಾಯಣ ಗೌಡ, ಗುರುಪ್ರಸಾದ್ ಮುಂತಾದವರು ಚಿತ್ರದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>