ಸಾಹಸ ನಿರ್ದೇಶಕ ಕೌರವ್ ವೆಂಕಟೇಶ್ ನಾಯಕರಾಗಲು ಸಿದ್ಧರಾಗಿದ್ದಾರೆ. ಅವರ ನಟನೆಯ ‘ಒಂದು ಸುಂದರ ದೆವ್ವದ ಕಥೆ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಕಪಿಲ್ ಈ ಚಿತ್ರದ ನಿರ್ದೇಶಕ. ನೃತ್ಯ ನಿರ್ದೇಶಕರೂ ಆಗಿರುವ ಕಪಿಲ್ ಈ ಹಿಂದೆ ‘ದಾಸರಹಳ್ಳಿ’, ‘ದೇವದೂತ’ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇದು ಅವರ ನಿರ್ದೇಶನದ ಹತ್ತನೇ ಚಿತ್ರ.
ADVERTISEMENT
ADVERTISEMENT
‘ಜೂನ್ ಅಂತ್ಯಕ್ಕೆ ಬೆಂಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ಮಾಡಲಾಗುವುದು. ಆರು ಜನ ಪ್ರತಿಭಾವಂತ ಹೆಣ್ಣುಮಕ್ಕಳು ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಕೂಡಿಟ್ಟ ಹಣವನ್ನು ಮೋಸದಿಂದ ಕಳೆದುಕೊಳ್ಳುತ್ತಾರೆ. ಅದೇ ಕಾಲೋನಿಯಲ್ಲಿ ಕಾವಲುಗಾರನಾಗಿ ಕೆಲಸ ಮಾಡುವ ನಾಯಕ ಈ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುತ್ತಾನೆ. ಹೇಗೆ ನ್ಯಾಯ ಕೊಡಿಸುತ್ತಾನೆ, ದೆವ್ವ ಹೇಗೆ ಬರುತ್ತದೆ ಎಂಬುದೇ ಚಿತ್ರಕಥೆ’ ಎಂದರು ನಿರ್ದೇಶಕರು.
ಶೋಭಾವತಿ ಕಪಿಲ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಯಿಕೃಷ್ಣ ಹೆಬ್ಬಾಳ ಅವರ ಚಿತ್ರಕಥೆ, ಸಂಭಾಷಣೆ, ಹರ್ಷ ಕೊಗೋಡ್ ಸಂಗೀತ, ಶಂಕರ್ ಆರಾಧ್ಯ ಛಾಯಾಚಿತ್ರಗ್ರಹಣ, ವಿನಯ್ ಜಿ. ಆಲೂರು ಸಂಕಲನವಿದೆ. ಕೆ.ಟಿ. ಮುನಿರಾಜ್, ಆರ್.ಲಕ್ಷ್ಮೀನಾರಾಯಣ ಗೌಡ, ಗುರುಪ್ರಸಾದ್ ಮುಂತಾದವರು ಚಿತ್ರದಲ್ಲಿದ್ದಾರೆ.