<p>ದಾನುಬಾಯ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಹುಲಿಬೇಟೆ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಚಿತ್ರ ಜನವರಿಯಲ್ಲಿ ತೆರೆಗೆ ಬರಲಿದೆ. ವಿಶ್ವ ಈ ಚಿತ್ರದ ನಾಯಕ. ಮಾಸ್ಟರ್ ಆನಂದ್ ಕೂಡಾ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.</p>.<p>ರಾಯಚೂರು, ಶಾವೂರ್, ಯಾದಗಿರಿ, ತುಮಕೂರು ಹಾಗೂ ಬೆಂಗಳೂರಿನಲ್ಲಿ 85 ದಿನಗಳ ಚಿತ್ರೀಕರಣ ನಡೆದಿದೆ.</p>.<p>ಕನ್ನಡ ನಾಡು, ನುಡಿ, ಜಲ ಹಾಗೂ ಭಾಷೆ ಹಿನ್ನೆಲೆಯ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಾಜ್ ಬಹದ್ದೂರ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ, ಗೀತರಚನೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ.</p>.<p>ನಾಗಣ್ಣ, ರವಿ ಕಾರಂಜಿ ಹಾಗೂ ಮಹೇಶ್ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ರಾಜ್ ಬಹದ್ದೂರ್ ಅವರ ಮೊದಲ ನಿರ್ದೇಶನದ ಚಿತ್ರವಿದು.</p>.<p>ರೋಹಿಣಿ ಕುಲಕರ್ಣಿ ನಾಯಕಿ. ತಮ್ಮ ಅಭಿನಯ, ನಿರೂಪಣೆ ಮೂಲಕ ಮನೆಮಾತಾಗಿರುವ ಮಾಸ್ಟರ್ ಆನಂದ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಂಜು ಸ್ವಾಮಿ,ಬಾಬು ಖಾನ್, ಗಣೇಶ್, ವಿಶಾಲ್, ವೆಂಕಿ, ಗಿಲ್ಲಿ ವೆಂಕಟೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.</p>.<p>ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.</p>.<p>ಧನ್ ಪಾಲ್ ಛಾಯಾಗ್ರಹಣ, ಹರ್ಷವರ್ಧನ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಹಾಗೂ ಮಂಜು ನಾಗಪ್ಪ ಅವರ ಸಾಹಸ ನಿರ್ದೇಶನ ‘ಹುಲಿಬೇಟೆ’ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾನುಬಾಯ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಹುಲಿಬೇಟೆ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಚಿತ್ರ ಜನವರಿಯಲ್ಲಿ ತೆರೆಗೆ ಬರಲಿದೆ. ವಿಶ್ವ ಈ ಚಿತ್ರದ ನಾಯಕ. ಮಾಸ್ಟರ್ ಆನಂದ್ ಕೂಡಾ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.</p>.<p>ರಾಯಚೂರು, ಶಾವೂರ್, ಯಾದಗಿರಿ, ತುಮಕೂರು ಹಾಗೂ ಬೆಂಗಳೂರಿನಲ್ಲಿ 85 ದಿನಗಳ ಚಿತ್ರೀಕರಣ ನಡೆದಿದೆ.</p>.<p>ಕನ್ನಡ ನಾಡು, ನುಡಿ, ಜಲ ಹಾಗೂ ಭಾಷೆ ಹಿನ್ನೆಲೆಯ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಾಜ್ ಬಹದ್ದೂರ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ, ಗೀತರಚನೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ.</p>.<p>ನಾಗಣ್ಣ, ರವಿ ಕಾರಂಜಿ ಹಾಗೂ ಮಹೇಶ್ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ರಾಜ್ ಬಹದ್ದೂರ್ ಅವರ ಮೊದಲ ನಿರ್ದೇಶನದ ಚಿತ್ರವಿದು.</p>.<p>ರೋಹಿಣಿ ಕುಲಕರ್ಣಿ ನಾಯಕಿ. ತಮ್ಮ ಅಭಿನಯ, ನಿರೂಪಣೆ ಮೂಲಕ ಮನೆಮಾತಾಗಿರುವ ಮಾಸ್ಟರ್ ಆನಂದ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಂಜು ಸ್ವಾಮಿ,ಬಾಬು ಖಾನ್, ಗಣೇಶ್, ವಿಶಾಲ್, ವೆಂಕಿ, ಗಿಲ್ಲಿ ವೆಂಕಟೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.</p>.<p>ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.</p>.<p>ಧನ್ ಪಾಲ್ ಛಾಯಾಗ್ರಹಣ, ಹರ್ಷವರ್ಧನ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಹಾಗೂ ಮಂಜು ನಾಗಪ್ಪ ಅವರ ಸಾಹಸ ನಿರ್ದೇಶನ ‘ಹುಲಿಬೇಟೆ’ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>