<p><strong>ಜೈಪುರ</strong>: ಹುಂಡೈನ ಅಲ್ಕಾಜಾರ್ ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಬಗ್ಗೆ ಕಾರಿನ ಮಾಲೀಕ ಪೊಲೀಸರಿಗೆ ದೂರು ನೀಡಿದ್ದು, ಈ ಹಿನ್ನೆಲೆ ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಬಾಲಿವುಡ್ ನಟ ಶಾರುಕ್ ಖಾನ್, ನಟಿ ದೀಪಿಕಾ ಪಡುಕೋಣೆ ಮತ್ತು ಇತರರ ವಿರುದ್ಧ ರಾಜಸ್ಥಾನ ಭರತ್ಪುರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p><p>ವಕೀಲ ಕೀರ್ತಿ ಸಿಂಗ್ ಅವರು ನೀಡಿದ ದೂರಿನ ಮೇಲೆ ಮಥುರಾ ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 2022ರಲ್ಲಿ ಸೋನಿಪತ್ನ ಡೀಲರ್ ಒಬ್ಬರಿಂದ ₹23.97 ಲಕ್ಷ ಕೊಟ್ಟು ಕಾರು ಖರೀದಿಸಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.</p><p>ಕಾರು ಖರೀದಿಸಿದ ಸ್ವಲ್ಪ ದಿನಗಳಲ್ಲೇ ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಎಷ್ಟೋ ಬಾರಿ ನನ್ನ ಮತ್ತು ನನ್ನ ಕುಟುಂಬದ ಪ್ರಾಣಕ್ಕೂ ಇದರಿಂದ ಸಂಚಕಾರ ಬಂದಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>ತಾಂತ್ರಿಕ ದೋಷದ ಬಗ್ಗೆ ಡೀಲರ್ಗೆ ತಿಳಿಸಿದ್ದು, ಇದು ಕಂಪನಿಯ ಕಡೆಯಿಂದ ಆಗಿರುವ ತಪ್ಪೆಂದು ಅವರು ತಿಳಿಸಿದ್ದಾರೆ. ತಾತ್ಕಾಲಿಕ ಪರಿಹಾರ ಸೂಚಿಸಿ ನುಣುಚಿಕೊಂಡಿದ್ದಾರೆ ಎಂದು ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.</p><p>‘ಇದರಿಂದ ಹಣ ಕಳೆದುಕೊಳ್ಳುತ್ತಿರುವುದಲ್ಲದೇ ನಾನು ಮತ್ತು ನನ್ನ ಕುಟುಂಬ ಮಾನಸಿಕ ನೋವು ಅನುಭವಿಸಿದ್ದೆವೆ’ ಎಂದು ಹೇಳಿದ್ದಾರೆ.</p><p>ಕಂಪನಿ, ಅದರ ಡೀಲರ್ಗಳು ಮತ್ತು ಬ್ರ್ಯಾಂಡ್ ಅಂಬಾಸಿಡರ್ಗಳಿಗೆ ಈ ಬಗ್ಗೆ ತಿಳಿದಿದ್ದು, ಅದನ್ನು ಮರೆಮಾಚಿದ್ದಾರೆ ಎಂದು ಸಿಂಗ್ ಆರೋಪಿಸಿದ್ದಾರೆ. ಇದು ವಂಚನೆ ಮತ್ತು ನಂಬಿಕೆ ದ್ರೋಹವಾಗಿದೆ ಎಂದು ಹೇಳಿದ್ದಾರೆ.</p><p>ಸಂಬಂಧಿತ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ಹುಂಡೈನ ಅಲ್ಕಾಜಾರ್ ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಬಗ್ಗೆ ಕಾರಿನ ಮಾಲೀಕ ಪೊಲೀಸರಿಗೆ ದೂರು ನೀಡಿದ್ದು, ಈ ಹಿನ್ನೆಲೆ ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಬಾಲಿವುಡ್ ನಟ ಶಾರುಕ್ ಖಾನ್, ನಟಿ ದೀಪಿಕಾ ಪಡುಕೋಣೆ ಮತ್ತು ಇತರರ ವಿರುದ್ಧ ರಾಜಸ್ಥಾನ ಭರತ್ಪುರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p><p>ವಕೀಲ ಕೀರ್ತಿ ಸಿಂಗ್ ಅವರು ನೀಡಿದ ದೂರಿನ ಮೇಲೆ ಮಥುರಾ ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 2022ರಲ್ಲಿ ಸೋನಿಪತ್ನ ಡೀಲರ್ ಒಬ್ಬರಿಂದ ₹23.97 ಲಕ್ಷ ಕೊಟ್ಟು ಕಾರು ಖರೀದಿಸಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.</p><p>ಕಾರು ಖರೀದಿಸಿದ ಸ್ವಲ್ಪ ದಿನಗಳಲ್ಲೇ ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಎಷ್ಟೋ ಬಾರಿ ನನ್ನ ಮತ್ತು ನನ್ನ ಕುಟುಂಬದ ಪ್ರಾಣಕ್ಕೂ ಇದರಿಂದ ಸಂಚಕಾರ ಬಂದಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>ತಾಂತ್ರಿಕ ದೋಷದ ಬಗ್ಗೆ ಡೀಲರ್ಗೆ ತಿಳಿಸಿದ್ದು, ಇದು ಕಂಪನಿಯ ಕಡೆಯಿಂದ ಆಗಿರುವ ತಪ್ಪೆಂದು ಅವರು ತಿಳಿಸಿದ್ದಾರೆ. ತಾತ್ಕಾಲಿಕ ಪರಿಹಾರ ಸೂಚಿಸಿ ನುಣುಚಿಕೊಂಡಿದ್ದಾರೆ ಎಂದು ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.</p><p>‘ಇದರಿಂದ ಹಣ ಕಳೆದುಕೊಳ್ಳುತ್ತಿರುವುದಲ್ಲದೇ ನಾನು ಮತ್ತು ನನ್ನ ಕುಟುಂಬ ಮಾನಸಿಕ ನೋವು ಅನುಭವಿಸಿದ್ದೆವೆ’ ಎಂದು ಹೇಳಿದ್ದಾರೆ.</p><p>ಕಂಪನಿ, ಅದರ ಡೀಲರ್ಗಳು ಮತ್ತು ಬ್ರ್ಯಾಂಡ್ ಅಂಬಾಸಿಡರ್ಗಳಿಗೆ ಈ ಬಗ್ಗೆ ತಿಳಿದಿದ್ದು, ಅದನ್ನು ಮರೆಮಾಚಿದ್ದಾರೆ ಎಂದು ಸಿಂಗ್ ಆರೋಪಿಸಿದ್ದಾರೆ. ಇದು ವಂಚನೆ ಮತ್ತು ನಂಬಿಕೆ ದ್ರೋಹವಾಗಿದೆ ಎಂದು ಹೇಳಿದ್ದಾರೆ.</p><p>ಸಂಬಂಧಿತ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>