<p><strong>ಬೆಂಗಳೂರು: </strong>‘ಕಬ್ಜ’ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಆಕಸ್ಮಿಕವಾಗಿ ನಡೆದ ಘಟನೆಯಲ್ಲಿ ನಟ ಉಪೇಂದ್ರ ಅವರ ತಲೆಗೆ ರಾಡ್ನಿಂದ ಏಟು ಬಿದ್ದಿದ್ದು, ಘಟನೆ ಬೆನ್ನಲ್ಲೇ ‘ನಾನು ಆರಾಮವಾಗಿದ್ದೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ಮಿನರ್ವ ಮಿಲ್ನಲ್ಲಿ ನಿರ್ಮಾಣ ಮಾಡಲಾಗಿರುವ ಅದ್ಧೂರಿ ಸೆಟ್ಗಳಲ್ಲಿ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ತೈಲ ಮಾರ್ಕೆಟ್ ನಡುವಿನಲ್ಲಿ ನಡೆಯುವ ಸಾಹಸ ದೃಶ್ಯದ ಚಿತ್ರೀಕರಣವಾಗುತ್ತಿತ್ತು. ಈ ಸಂದರ್ಭದಲ್ಲಿ ಸಹನಟ ಬೀಸುವ ರಾಡ್ನಿಂದ, ಉಪೇಂದ್ರ ಅವರು ಬಗ್ಗಿ ತಪ್ಪಿಸಿಕೊಳ್ಳಬೇಕಿತ್ತು. ಈ ವೇಳೆ ಆಕಸ್ಮಿಕವಾಗಿ ರಾಡ್ ಉಪೇಂದ್ರ ಅವರ ತಲೆಗೆ ಬಡಿದಿದೆ. ರಾಡ್ ಬಲ ಕಿವಿಯ ಮೇಲ್ಭಾಗದಲ್ಲಿ ತಲೆಗೆ ಸವರಿಕೊಂಡು ಹೋದ ಕಾರಣ ದೊಡ್ಡ ಅನಾಹುತ ಸಂಭವಿಸಿಲ್ಲ. ಇದಾದ ಬಳಿಕವೂ ತಮ್ಮ ಪಾತ್ರದ ಚಿತ್ರೀಕರಣ ಮುಗಿಸಿಕೊಂಡೇ ಅವರು ಅಲ್ಲಿಂದ ತೆರಳಿದ್ದಾರೆ.</p>.<p>ಘಟನೆ ಕುರಿತು ಟ್ವೀಟ್ ಮಾಡಿರುವ ಉಪೇಂದ್ರ, ‘ಕಬ್ಜ ಚಿತ್ರೀಕರಣದಲ್ಲಿ ನಡೆದ ಒಂದು ಸಣ್ಣ ಘಟನೆ, ತೊಂದರೆ ಇಲ್ಲ ನಾನು ಆರಾಮವಾಗಿದ್ದೇನೆ. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು. ಗಾಬರಿಪಡಬೇಕಾದದ್ದು ಏನೂ ಇಲ್ಲ’ ಎಂದಿದ್ದಾರೆ. ಜೊತೆಗೆ ಫೋಟೊ ಕೂಡಾ ಅಪ್ಲೋಡ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕಬ್ಜ’ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಆಕಸ್ಮಿಕವಾಗಿ ನಡೆದ ಘಟನೆಯಲ್ಲಿ ನಟ ಉಪೇಂದ್ರ ಅವರ ತಲೆಗೆ ರಾಡ್ನಿಂದ ಏಟು ಬಿದ್ದಿದ್ದು, ಘಟನೆ ಬೆನ್ನಲ್ಲೇ ‘ನಾನು ಆರಾಮವಾಗಿದ್ದೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ಮಿನರ್ವ ಮಿಲ್ನಲ್ಲಿ ನಿರ್ಮಾಣ ಮಾಡಲಾಗಿರುವ ಅದ್ಧೂರಿ ಸೆಟ್ಗಳಲ್ಲಿ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ತೈಲ ಮಾರ್ಕೆಟ್ ನಡುವಿನಲ್ಲಿ ನಡೆಯುವ ಸಾಹಸ ದೃಶ್ಯದ ಚಿತ್ರೀಕರಣವಾಗುತ್ತಿತ್ತು. ಈ ಸಂದರ್ಭದಲ್ಲಿ ಸಹನಟ ಬೀಸುವ ರಾಡ್ನಿಂದ, ಉಪೇಂದ್ರ ಅವರು ಬಗ್ಗಿ ತಪ್ಪಿಸಿಕೊಳ್ಳಬೇಕಿತ್ತು. ಈ ವೇಳೆ ಆಕಸ್ಮಿಕವಾಗಿ ರಾಡ್ ಉಪೇಂದ್ರ ಅವರ ತಲೆಗೆ ಬಡಿದಿದೆ. ರಾಡ್ ಬಲ ಕಿವಿಯ ಮೇಲ್ಭಾಗದಲ್ಲಿ ತಲೆಗೆ ಸವರಿಕೊಂಡು ಹೋದ ಕಾರಣ ದೊಡ್ಡ ಅನಾಹುತ ಸಂಭವಿಸಿಲ್ಲ. ಇದಾದ ಬಳಿಕವೂ ತಮ್ಮ ಪಾತ್ರದ ಚಿತ್ರೀಕರಣ ಮುಗಿಸಿಕೊಂಡೇ ಅವರು ಅಲ್ಲಿಂದ ತೆರಳಿದ್ದಾರೆ.</p>.<p>ಘಟನೆ ಕುರಿತು ಟ್ವೀಟ್ ಮಾಡಿರುವ ಉಪೇಂದ್ರ, ‘ಕಬ್ಜ ಚಿತ್ರೀಕರಣದಲ್ಲಿ ನಡೆದ ಒಂದು ಸಣ್ಣ ಘಟನೆ, ತೊಂದರೆ ಇಲ್ಲ ನಾನು ಆರಾಮವಾಗಿದ್ದೇನೆ. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು. ಗಾಬರಿಪಡಬೇಕಾದದ್ದು ಏನೂ ಇಲ್ಲ’ ಎಂದಿದ್ದಾರೆ. ಜೊತೆಗೆ ಫೋಟೊ ಕೂಡಾ ಅಪ್ಲೋಡ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>