ಈ ಬಗ್ಗೆ ಮಾಹಿತಿ ನೀಡಲು ಚಿತ್ರ ತಂಡವು ಈಚೆಗೆ ಮಾಧ್ಯಮಗಳ ಮುಂದೆ ಬಂದಿತ್ತು. ಚಿತ್ರದ ಬಿಡುಗಡೆ ತಡವಾಗಿರುವುದಕ್ಕೆ ಕಾರಣಗಳನ್ನು ಹೇಳಿದ ನಿರ್ಮಾಪಕ, ನಿರ್ದೇಶಕ ಆರ್. ಚಂದ್ರು ಅವರು, ‘ಎರಡು ಭಾಷೆಗಳಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ಸಿನಿಮಾ ಬಿಡುಗಡೆಗೆ ಆತುರಪಡುವುದು ಬೇಡ ಎಂದು ಉಪೇಂದ್ರ ಅವರೇ ಸಲಹೆ ನೀಡಿದ್ದರು. ಟಾಲಿವುಡ್ನಲ್ಲಿ ಸುಮಾರು 250 ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಶ್ರೇಯಸ್ ಮೀಡಿಯಾದವರು ಯೋಜನೆ ಹಾಕಿಕೊಂಡಿದ್ದಾರೆ. ಇಲ್ಲಿನ ವಿತರಕರೂ ‘ಬೇಗನೆ ಸಿನಿಮಾ ಕೊಡಿ’ ಎಂದು ಕೇಳುತ್ತಿದ್ದಾರೆ. ನಮ್ಮ ಕಡೆಯಿಂದ ತಾಂತ್ರಿಕ ಕೆಲಸಗಳು ತಡವಾಗುತ್ತಿವೆ. ಇದು ಬಿಟ್ಟರೆ ಬೇರೆ ಯಾವ ಸಮಸ್ಯೆಯೂ ಇಲ್ಲ. ಏಪ್ರಿಲ್ 12ರಂದು ಸಿನಿಮಾ ತೆರೆಕಾಣುವ ಸಾಧ್ಯತೆ ಇದೆ’ ಎಂದರು.