<p><strong>ಮುಂಬೈ:</strong> ಶಿವಸೇನಾ ನಾಯಕರೊಂದಿಗೆ ಕಳೆದ ಕೆಲವು ದಿನಗಳಿಂದ ವಾಗ್ವಾದ ನಡೆಸುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್, ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಕಟ್ಟಡ ಕುಸಿದು ಕನಿಷ್ಠ 10 ಜನರು ಮೃತಪಟ್ಟ ಬಳಿಕ ಸೋಮವಾರ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ್ದಾರೆ.</p>.<p>ಟ್ವಿಟರ್ ಬಳಕೆದಾರರೊಬ್ಬರು ಮೂರು ಅಂತಸ್ತಿನ ಕಟ್ಟಡದ ಕುಸಿತದ ಬಗ್ಗೆ ಲೇಖನವನ್ನು ಟ್ವಿಟರ್ನಲ್ಲಿ ಹಂಚಿಕೊಂಡು ಕಂಗನಾ ಟೀಂಗೆ ಟ್ಯಾಗ್ ಮಾಡಿದ ಬಳಿಕ ಅದನ್ನು ರೀಟ್ವೀಟ್ ಮಾಡಿರುವ ಕಂಗನಾ, ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.</p>.<p>ಇದೇ ವೇಳೆ ಮಹಾರಾಷ್ಟ್ರ ಸರ್ಕಾರವು क-क-क-क-कंगना ..... ನನ್ನನ್ನು ನಿರಂತರವಾಗಿ ಪೀಡಿಸುವುದನ್ನು ನಿಲ್ಲಿಸಿದರೆ ಇಡೀ ರಾಜ್ಯವು ಹೇಗೆ ಕುಸಿಯುತ್ತಿದೆ ಎಂಬುದು ಅವರಿಗೆ ತಿಳಿಯುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ನೋವಿನ ದೃಶ್ಯಗಳು! ಮಹಾರಾಷ್ಟ್ರ ಸರ್ಕಾರಕ್ಕೆ ಕಂಗನಾ ತಂಡದ ಕಚೇರಿಯನ್ನು ಕೆಡವಲು ಮಾತ್ರ ಸಮಯವಿದ್ದಾಗ ಈ ರೀತಿಯ ಅವಘಡಗಳು ಸಂಭವಿಸುತ್ತವೆ ಎಂದು ಟ್ವಿಟರ್ ಬಳಕೆದಾರರು ಬರೆದುಕೊಂಡಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/entertainment/cinema/kangana-ranaut-urges-pmo-to-unite-all-film-industries-into-one-763406.html" itemprop="url">ಚಿತ್ರರಂಗಕ್ಕೂ, ಭಯೋತ್ಪಾದನೆಗೂ ಸಂಬಂಧವಿದೆಯೇ? ಹೌದೆನ್ನುತ್ತಾರೆ ನಟಿ ಕಂಗನಾ </a></p>.<p>ಭಿವಾಂಡಿಯ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಮುಂಜಾನೆ 3.40 ರ ಸುಮಾರಿಗೆ ಕಟ್ಟಡ ಕುಸಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಶಿವಸೇನಾ ನಾಯಕರೊಂದಿಗೆ ಕಳೆದ ಕೆಲವು ದಿನಗಳಿಂದ ವಾಗ್ವಾದ ನಡೆಸುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್, ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಕಟ್ಟಡ ಕುಸಿದು ಕನಿಷ್ಠ 10 ಜನರು ಮೃತಪಟ್ಟ ಬಳಿಕ ಸೋಮವಾರ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ್ದಾರೆ.</p>.<p>ಟ್ವಿಟರ್ ಬಳಕೆದಾರರೊಬ್ಬರು ಮೂರು ಅಂತಸ್ತಿನ ಕಟ್ಟಡದ ಕುಸಿತದ ಬಗ್ಗೆ ಲೇಖನವನ್ನು ಟ್ವಿಟರ್ನಲ್ಲಿ ಹಂಚಿಕೊಂಡು ಕಂಗನಾ ಟೀಂಗೆ ಟ್ಯಾಗ್ ಮಾಡಿದ ಬಳಿಕ ಅದನ್ನು ರೀಟ್ವೀಟ್ ಮಾಡಿರುವ ಕಂಗನಾ, ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.</p>.<p>ಇದೇ ವೇಳೆ ಮಹಾರಾಷ್ಟ್ರ ಸರ್ಕಾರವು क-क-क-क-कंगना ..... ನನ್ನನ್ನು ನಿರಂತರವಾಗಿ ಪೀಡಿಸುವುದನ್ನು ನಿಲ್ಲಿಸಿದರೆ ಇಡೀ ರಾಜ್ಯವು ಹೇಗೆ ಕುಸಿಯುತ್ತಿದೆ ಎಂಬುದು ಅವರಿಗೆ ತಿಳಿಯುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ನೋವಿನ ದೃಶ್ಯಗಳು! ಮಹಾರಾಷ್ಟ್ರ ಸರ್ಕಾರಕ್ಕೆ ಕಂಗನಾ ತಂಡದ ಕಚೇರಿಯನ್ನು ಕೆಡವಲು ಮಾತ್ರ ಸಮಯವಿದ್ದಾಗ ಈ ರೀತಿಯ ಅವಘಡಗಳು ಸಂಭವಿಸುತ್ತವೆ ಎಂದು ಟ್ವಿಟರ್ ಬಳಕೆದಾರರು ಬರೆದುಕೊಂಡಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/entertainment/cinema/kangana-ranaut-urges-pmo-to-unite-all-film-industries-into-one-763406.html" itemprop="url">ಚಿತ್ರರಂಗಕ್ಕೂ, ಭಯೋತ್ಪಾದನೆಗೂ ಸಂಬಂಧವಿದೆಯೇ? ಹೌದೆನ್ನುತ್ತಾರೆ ನಟಿ ಕಂಗನಾ </a></p>.<p>ಭಿವಾಂಡಿಯ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಮುಂಜಾನೆ 3.40 ರ ಸುಮಾರಿಗೆ ಕಟ್ಟಡ ಕುಸಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>