ಸಂದೇಶ್ ಶೆಟ್ಟಿ ಅಜ್ರಿ ನಿರ್ದೇಶನದ ‘ಇನಾಮ್ದಾರ್’ ಚಿತ್ರ ಶೂಟಿಂಗ್ ಮುಗಿಸಿದ್ದು ಶೀಘ್ರ ತೆರೆ ಕಾಣಲಿದೆ. ಯೋಗಪಟು ನಿರಂಜನ್ ಶೆಟ್ಟಿ ತಲ್ಲೂರು ನಿರ್ಮಾಣದ ಈ ಚಿತ್ರಕ್ಕೆರಂಜನ್ ಛತ್ರಪತಿ ನಾಯಕ.ಶಿರಶ್ರೀ ಅಂಚನ್ ನಾಯಕಿ. 5 ತಿಂಗಳ ಕಾಲ ಶೂಟಿಂಗ್ ನಡೆದಿದೆ. ಪಶ್ಚಿಮ ಘಟ್ಟ ಪ್ರದೇಶವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ.
ಬಯಲುಸೀಮೆಯ ಒಂದು ಜನಾಂಗ ಮತ್ತು ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಇನ್ನೊಂದು ಜನಾಂಗ ನಡುವೆ ನಡೆಯುವ ವರ್ಣ ಭೇದದ ಕಥಾ ಹಂದರದ ಚಿತ್ರವಿದು. ಚಿತ್ರದುದ್ದಕ್ಕೂ ಪಶ್ಚಿಮ ಘಟ್ಟದ ತಪ್ಪಲಿನ ಸೌಂದರ್ಯ ಕಾಣಬಹುದಾಗಿದ್ದು, ಬಯಲು ಸೀಮೆಯ ಸೊಬಗು ಚಿತ್ರ ರಸಿಕರಿಗೆ ಮೆಚ್ಚಿಗೆಯಾಗಲಿದೆ.