ಹೈದರಾಬಾದ್: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ನಟ ಹಾಗೂ ಮೆಗಾಸ್ಟಾರ್ ಚಿರಂಜೀವಿ ಅವರ ಅಳಿಯ ಸಾಯಿ ಧರ್ಮ ತೇಜ್ ಅವರಿಗೆ ಹೈದರಾಬಾದ್ ಜುಬಿಲಿ ಹಿಲ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೈದರಾಬಾದ್ನ ಮಾಧಾಪುರ್ ಕೇಬಲ್ ಸೇತುವೆಯ ಮೇಲೆ ಸಾಯಿ ಧರ್ಮ ತೇಜ್ ಅವರು ಶುಕ್ರವಾರ ರಾತ್ರಿ ಕ್ರೀಡಾ ಬೈಕ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿತ್ತು.