<p><strong>ಮಡಿಕೇರಿ:</strong> ಬಹುಭಾಷಾ ನಟಿ ರಶ್ಮಿಕಾ ಮಂದಣ್ಣಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮತ್ತೊಂದು ಸಮನ್ಸ್ ಜಾರಿಗೊಳಿಸಿದ್ದಾರೆ. ಹೂಡಿಕೆ ಹಾಗೂ ಬ್ಯಾಂಕ್ ವ್ಯವಹಾರಗಳ ದಾಖಲೆ ಸಹಿತ ಮೈಸೂರಿನ ಐ.ಟಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ತೆರಿಗೆ ವಂಚನೆಯ ಆರೋಪದ ಮೇಲೆ ಜನವರಿ 16ರಂದು ವಿರಾಜಪೇಟೆಯ ಕುಕ್ಲೂರಿನ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿ ಪರಿಶೀಲಿಸಿದ್ದರು. ರಶ್ಮಿಕಾ, ಅವರ ತಂದೆ ಮದನ್ ಮಂದಣ್ಣ, ತಾಯಿ ಸುಮನ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಈಗ ಮತ್ತೆ ವಿಚಾರಣೆಗೆ ಕರೆಯಲಾಗಿದೆ.</p>.<p>ದಾಳಿಯ ವೇಳೆ ನಗದು ಹಾಗೂ ಅಘೋಷಿತ ಆಸ್ತಿ ಪತ್ತೆಯಾಗಿದೆ ಎನ್ನಲಾಗಿದೆ. ರಶ್ಮಿಕಾ ಅವರು ಆದಾಯ ತೆರಿಗೆ ಸಲ್ಲಿಕೆಯಲ್ಲಿ ಲೋಪ ಎಸಗಿರುವುದು ಕಂಡುಬಂದಿದೆ. ಮದನ್ ಮಂದಣ್ಣ ಒಡೆತನದ ಕಲ್ಯಾಣ ಮಂಟಪದ ವ್ಯವಹಾರದ ಮಾಹಿತಿಯನ್ನು ಮುಚ್ಚಿಟ್ಟ ಆಪಾದನೆ ಮೇಲೆ ಈ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ.</p>.<p>ಕಾಫಿ ತೋಟ, ಹೊಸದಾಗಿ ಖರೀದಿಸಿದ್ದ ಜಾಗ, ಬಿಟ್ಟಂಗಾಲದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ವಸತಿಯುತ ಶಾಲೆ ಹಾಗೂ ಪೆಟ್ರೋಲ್ ಬಂಕ್ ಜಾಗದ ದಾಖಲಾತಿಯನ್ನೂ ದಾಳಿಯ ವೇಳೆ ಅಧಿಕಾರಿಗಳು ಪರಿಶೀಲಿಸಿದ್ದರು.</p>.<p><strong>ತಪ್ಪು ಮಾಹಿತಿ– ನೋವು: </strong>‘ಯಾರದೋತಪ್ಪು ಮಾಹಿತಿಯಿಂದ ಮನೆಯ ಮೇಲೆ ಐ.ಟಿ ದಾಳಿಯಾಗಿದೆ. ನಾನು ಈಗ ಎಲ್ಲವನ್ನೂ ಕಳೆದುಕೊಂಡಿದ್ದೇನೆ. ಯಾವುದೇ ಅವ್ಯವಹಾರ ನಡೆಸಿಲ್ಲ’ ಎಂದು ರಶ್ಮಿಕಾ ತಂದೆ ಮದನ್ ತಮ್ಮ ಸ್ನೇಹಿತರೊಂದಿಗೆ ನೋವು ತೋಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಬಹುಭಾಷಾ ನಟಿ ರಶ್ಮಿಕಾ ಮಂದಣ್ಣಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮತ್ತೊಂದು ಸಮನ್ಸ್ ಜಾರಿಗೊಳಿಸಿದ್ದಾರೆ. ಹೂಡಿಕೆ ಹಾಗೂ ಬ್ಯಾಂಕ್ ವ್ಯವಹಾರಗಳ ದಾಖಲೆ ಸಹಿತ ಮೈಸೂರಿನ ಐ.ಟಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ತೆರಿಗೆ ವಂಚನೆಯ ಆರೋಪದ ಮೇಲೆ ಜನವರಿ 16ರಂದು ವಿರಾಜಪೇಟೆಯ ಕುಕ್ಲೂರಿನ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿ ಪರಿಶೀಲಿಸಿದ್ದರು. ರಶ್ಮಿಕಾ, ಅವರ ತಂದೆ ಮದನ್ ಮಂದಣ್ಣ, ತಾಯಿ ಸುಮನ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಈಗ ಮತ್ತೆ ವಿಚಾರಣೆಗೆ ಕರೆಯಲಾಗಿದೆ.</p>.<p>ದಾಳಿಯ ವೇಳೆ ನಗದು ಹಾಗೂ ಅಘೋಷಿತ ಆಸ್ತಿ ಪತ್ತೆಯಾಗಿದೆ ಎನ್ನಲಾಗಿದೆ. ರಶ್ಮಿಕಾ ಅವರು ಆದಾಯ ತೆರಿಗೆ ಸಲ್ಲಿಕೆಯಲ್ಲಿ ಲೋಪ ಎಸಗಿರುವುದು ಕಂಡುಬಂದಿದೆ. ಮದನ್ ಮಂದಣ್ಣ ಒಡೆತನದ ಕಲ್ಯಾಣ ಮಂಟಪದ ವ್ಯವಹಾರದ ಮಾಹಿತಿಯನ್ನು ಮುಚ್ಚಿಟ್ಟ ಆಪಾದನೆ ಮೇಲೆ ಈ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ.</p>.<p>ಕಾಫಿ ತೋಟ, ಹೊಸದಾಗಿ ಖರೀದಿಸಿದ್ದ ಜಾಗ, ಬಿಟ್ಟಂಗಾಲದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ವಸತಿಯುತ ಶಾಲೆ ಹಾಗೂ ಪೆಟ್ರೋಲ್ ಬಂಕ್ ಜಾಗದ ದಾಖಲಾತಿಯನ್ನೂ ದಾಳಿಯ ವೇಳೆ ಅಧಿಕಾರಿಗಳು ಪರಿಶೀಲಿಸಿದ್ದರು.</p>.<p><strong>ತಪ್ಪು ಮಾಹಿತಿ– ನೋವು: </strong>‘ಯಾರದೋತಪ್ಪು ಮಾಹಿತಿಯಿಂದ ಮನೆಯ ಮೇಲೆ ಐ.ಟಿ ದಾಳಿಯಾಗಿದೆ. ನಾನು ಈಗ ಎಲ್ಲವನ್ನೂ ಕಳೆದುಕೊಂಡಿದ್ದೇನೆ. ಯಾವುದೇ ಅವ್ಯವಹಾರ ನಡೆಸಿಲ್ಲ’ ಎಂದು ರಶ್ಮಿಕಾ ತಂದೆ ಮದನ್ ತಮ್ಮ ಸ್ನೇಹಿತರೊಂದಿಗೆ ನೋವು ತೋಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>