<p>ಬಹುತೇಕ ಹೊಸಬರಿಂದಲೇ ಕೂಡಿರುವ ‘ಜೈ ಗದಾ ಕೇಸರಿ’ ಚಿತ್ರದ ಟೀಸರ್ ಮತ್ತು ಹಾಡುಗಳು ಇತ್ತೀಚೆಗಷ್ಟೆ ಬಿಡುಗಡೆಗೊಂಡಿವೆ. ಯತೀಶ್ಕುಮಾರ್.ವಿ ಮತ್ತು ಮಂಜು ಹೊಸಪೇಟೆ ಜಂಟಿಯಾಗಿ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಬಸವರಾಜ್ ಭಜಂತ್ರಿ ಬಂಡವಾಳ ಹೂಡಿದ್ದಾರೆ.</p>.<p>‘ರಾಮ ಮತ್ತು ಹನುಮಂತನ ಬಗೆಗಿನ ಸಾಕಷ್ಟು ವಿಚಾರಗಳು ಚಿತ್ರದಲ್ಲಿದೆ. ಆಂಜನೇಯನ ಗದೆಗೆ ಪ್ರಾಮುಖ್ಯ ನೀಡಲಾಗಿದ್ದು, ಇದರ ಸುತ್ತ ಸನ್ನಿವೇಶಗಳು ಸಾಗುತ್ತವೆ. ಊರಿನ ದೇವಸ್ಥಾನದಲ್ಲಿರುವ ಗದೆಯ ಮೇಲೆ ಆಕ್ರಮಣ ಮಾಡಲು ದುರುಳರು ಬಂದಾಗ, ಅದನ್ನು ರಕ್ಷಣೆ ಮಾಡಲು ಇಬ್ಬರು ಹುಡುಗರು ಮುಂದಾಗುತ್ತಾರೆ. ಆ ನಂತರ ಯಾವ ರೀತಿಯ ಬೆಳವಣಿಗೆಗಳು ಆಗುತ್ತವೆ ಎಂಬುದೇ ಚಿತ್ರ’ ಎಂದರು ನಿರ್ದೇಶಕರು.</p>.<p>ರಾಜ್ ಚರಣ್ ಬ್ರಹ್ಮಾವರ್ ಮತ್ತು ಈಶ್ವರ ಚಿತ್ರದ ನಾಯಕರು. ಜೀವಿತಾ ವಸಿಷ್ಠ ನಾಯಕಿ. ಅವಿನಾಶ್, ಹೊನ್ನವಳ್ಳಿ ಕೃಷ್ಣ, ಧರ್ಮ, ಅರವಿಂದರಾವ್, ಜಯರಾಮ್ ಮುಂತಾದವರು ನಟಿಸಿದ್ದಾರೆ.</p>.<p>ಕಾರ್ತಿಕ್ ವೆಂಕಟೇಶ್, ಪ್ರಸನ್ನ ಬೋಜಶೆಟ್ಟರ್ ಹಾಗೂ ಥಾಮಸ್ ಸ್ಯಾಮ್ ಸಂಗೀತ ಸಂಯೋಜಿಸಿದ್ದಾರೆ. ಶ್ಯಾಮ್ ಸಿಂಧನೂರು, ಎಸ್.ನಾಗರಾಜ್ ಛಾಯಾಚಿತ್ರಗ್ರಹಣವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಹುತೇಕ ಹೊಸಬರಿಂದಲೇ ಕೂಡಿರುವ ‘ಜೈ ಗದಾ ಕೇಸರಿ’ ಚಿತ್ರದ ಟೀಸರ್ ಮತ್ತು ಹಾಡುಗಳು ಇತ್ತೀಚೆಗಷ್ಟೆ ಬಿಡುಗಡೆಗೊಂಡಿವೆ. ಯತೀಶ್ಕುಮಾರ್.ವಿ ಮತ್ತು ಮಂಜು ಹೊಸಪೇಟೆ ಜಂಟಿಯಾಗಿ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಬಸವರಾಜ್ ಭಜಂತ್ರಿ ಬಂಡವಾಳ ಹೂಡಿದ್ದಾರೆ.</p>.<p>‘ರಾಮ ಮತ್ತು ಹನುಮಂತನ ಬಗೆಗಿನ ಸಾಕಷ್ಟು ವಿಚಾರಗಳು ಚಿತ್ರದಲ್ಲಿದೆ. ಆಂಜನೇಯನ ಗದೆಗೆ ಪ್ರಾಮುಖ್ಯ ನೀಡಲಾಗಿದ್ದು, ಇದರ ಸುತ್ತ ಸನ್ನಿವೇಶಗಳು ಸಾಗುತ್ತವೆ. ಊರಿನ ದೇವಸ್ಥಾನದಲ್ಲಿರುವ ಗದೆಯ ಮೇಲೆ ಆಕ್ರಮಣ ಮಾಡಲು ದುರುಳರು ಬಂದಾಗ, ಅದನ್ನು ರಕ್ಷಣೆ ಮಾಡಲು ಇಬ್ಬರು ಹುಡುಗರು ಮುಂದಾಗುತ್ತಾರೆ. ಆ ನಂತರ ಯಾವ ರೀತಿಯ ಬೆಳವಣಿಗೆಗಳು ಆಗುತ್ತವೆ ಎಂಬುದೇ ಚಿತ್ರ’ ಎಂದರು ನಿರ್ದೇಶಕರು.</p>.<p>ರಾಜ್ ಚರಣ್ ಬ್ರಹ್ಮಾವರ್ ಮತ್ತು ಈಶ್ವರ ಚಿತ್ರದ ನಾಯಕರು. ಜೀವಿತಾ ವಸಿಷ್ಠ ನಾಯಕಿ. ಅವಿನಾಶ್, ಹೊನ್ನವಳ್ಳಿ ಕೃಷ್ಣ, ಧರ್ಮ, ಅರವಿಂದರಾವ್, ಜಯರಾಮ್ ಮುಂತಾದವರು ನಟಿಸಿದ್ದಾರೆ.</p>.<p>ಕಾರ್ತಿಕ್ ವೆಂಕಟೇಶ್, ಪ್ರಸನ್ನ ಬೋಜಶೆಟ್ಟರ್ ಹಾಗೂ ಥಾಮಸ್ ಸ್ಯಾಮ್ ಸಂಗೀತ ಸಂಯೋಜಿಸಿದ್ದಾರೆ. ಶ್ಯಾಮ್ ಸಿಂಧನೂರು, ಎಸ್.ನಾಗರಾಜ್ ಛಾಯಾಚಿತ್ರಗ್ರಹಣವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>