<p>ಬೆಂಗಳೂರು: ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಆಯೋಜಿಸಿದ್ದ ಕಿರು ಚಲನಚಿತ್ರೋತ್ಸವ ಗುರುವಾರ ಮುಕ್ತಾಯವಾಯಿತು.</p>.<p>ಕಿರುಚಿತ್ರೋತ್ಸವದ ತೀರ್ಪುಗಾರ, ಲವ್ ಮಾಕ್ಟೇಲ್ ಸರಣಿಯ ಸಂಕಲನಕಾರ ಕ್ರೇಜಿ ಮೈಂಡ್ಸ್ ಮಾತನಾಡಿ, ‘ಚಲನಚಿತ್ರದಲ್ಲಿ ಅಸಾಧಾರಣ ಕಥೆಯ ಚಿತ್ರಕಥೆ ಮತ್ತು ಸಂಕಲನದ ಪಾತ್ರ ಮಹತ್ವದ್ದಾಗಿದೆ’ ಎಂದು ಹೇಳಿದರು.</p>.<p>ಸಿನಿಮಾದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆಯಾಗುತ್ತಿದೆ. ಆದರೆ, ಅದು ಎಂದಿಗೂ ಮಾನವನ ಭಾವನೆಯ ಜಟಿಲತೆಗಳನ್ನು ತೋರಿಸಲು ಸಾಧ್ಯವಿಲ್ಲ. ಸಿನಿಮಾದಲ್ಲಿ ಎಐ ತಂತ್ರಜ್ಞಾನದ ಬಳಕೆ ದಶಕದ ಹಿಂದಿನಿಂದಲೂ ಇದೆ ಎಂದು ಹೇಳಿದರು.</p>.<p>ಫಿಲ್ಮ್ಫೇರ್ ಪ್ರಶಸ್ತಿ ವಿಜೇತ ನವೀನ್ ಶಂಕರ್ ಮಾತನಾಡಿ, ‘ಈ ರೀತಿಯ ಚಲನಚಿತ್ರೋತ್ಸವ ಹೊಸ ಆಲೋಚನೆ ಮತ್ತು ಉತ್ಸಾಹಕ್ಕೆ ಕಾರಣವಾಗುತ್ತದೆ. ಚಿತ್ರ ಮಾಡಲು ಧೈರ್ಯವನ್ನು ತಂದುಕೊಡುತ್ತದೆ. ಕಾಲೇಜು ಆವರಣದಲ್ಲಿ ಚಿತ್ರೋತ್ಸವ ನಡೆಯುತ್ತಿರುವುದರಿಂದ ಅದರ ಪರಿಣಾಮ ಹೆಚ್ಚಿರುತ್ತದೆ. ವಿದ್ಯಾರ್ಥಿಗಳನ್ನು ಇನ್ನಷ್ಟು ಕ್ರಿಯಾಶೀಲರನ್ನಾಗಿ ಮಾಡುತ್ತದೆ’ ಎಂದರು.</p>.<p>ತೀರ್ಪುಗಾರರ ಸಮಿತಿ ಸದಸ್ಯ ಬಿ.ಎಸ್. ಕೆಂಪರಾಜು, ನವೀನ್ ದ್ವಾರಕನಾಥ್, ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಸಹ ಕುಲಪತಿ ದಿನೇಶ್ ನೀಲಕಾಂತ್, ಶೈಕ್ಷಣಿಕ ವಿಭಾಗದ ಉಪ-ಡೀನ್ ಕಿರಣ್ ಎಸ್., ಪ್ರಾಧ್ಯಾಪಕಿ ಸಂಗೀತಾ ದೇವನಾಥನ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಭಾರ್ಗವಿ ಡಿ. ಹೆಮ್ಮಿಗೆ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-4-1334972566</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಆಯೋಜಿಸಿದ್ದ ಕಿರು ಚಲನಚಿತ್ರೋತ್ಸವ ಗುರುವಾರ ಮುಕ್ತಾಯವಾಯಿತು.</p>.<p>ಕಿರುಚಿತ್ರೋತ್ಸವದ ತೀರ್ಪುಗಾರ, ಲವ್ ಮಾಕ್ಟೇಲ್ ಸರಣಿಯ ಸಂಕಲನಕಾರ ಕ್ರೇಜಿ ಮೈಂಡ್ಸ್ ಮಾತನಾಡಿ, ‘ಚಲನಚಿತ್ರದಲ್ಲಿ ಅಸಾಧಾರಣ ಕಥೆಯ ಚಿತ್ರಕಥೆ ಮತ್ತು ಸಂಕಲನದ ಪಾತ್ರ ಮಹತ್ವದ್ದಾಗಿದೆ’ ಎಂದು ಹೇಳಿದರು.</p>.<p>ಸಿನಿಮಾದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆಯಾಗುತ್ತಿದೆ. ಆದರೆ, ಅದು ಎಂದಿಗೂ ಮಾನವನ ಭಾವನೆಯ ಜಟಿಲತೆಗಳನ್ನು ತೋರಿಸಲು ಸಾಧ್ಯವಿಲ್ಲ. ಸಿನಿಮಾದಲ್ಲಿ ಎಐ ತಂತ್ರಜ್ಞಾನದ ಬಳಕೆ ದಶಕದ ಹಿಂದಿನಿಂದಲೂ ಇದೆ ಎಂದು ಹೇಳಿದರು.</p>.<p>ಫಿಲ್ಮ್ಫೇರ್ ಪ್ರಶಸ್ತಿ ವಿಜೇತ ನವೀನ್ ಶಂಕರ್ ಮಾತನಾಡಿ, ‘ಈ ರೀತಿಯ ಚಲನಚಿತ್ರೋತ್ಸವ ಹೊಸ ಆಲೋಚನೆ ಮತ್ತು ಉತ್ಸಾಹಕ್ಕೆ ಕಾರಣವಾಗುತ್ತದೆ. ಚಿತ್ರ ಮಾಡಲು ಧೈರ್ಯವನ್ನು ತಂದುಕೊಡುತ್ತದೆ. ಕಾಲೇಜು ಆವರಣದಲ್ಲಿ ಚಿತ್ರೋತ್ಸವ ನಡೆಯುತ್ತಿರುವುದರಿಂದ ಅದರ ಪರಿಣಾಮ ಹೆಚ್ಚಿರುತ್ತದೆ. ವಿದ್ಯಾರ್ಥಿಗಳನ್ನು ಇನ್ನಷ್ಟು ಕ್ರಿಯಾಶೀಲರನ್ನಾಗಿ ಮಾಡುತ್ತದೆ’ ಎಂದರು.</p>.<p>ತೀರ್ಪುಗಾರರ ಸಮಿತಿ ಸದಸ್ಯ ಬಿ.ಎಸ್. ಕೆಂಪರಾಜು, ನವೀನ್ ದ್ವಾರಕನಾಥ್, ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಸಹ ಕುಲಪತಿ ದಿನೇಶ್ ನೀಲಕಾಂತ್, ಶೈಕ್ಷಣಿಕ ವಿಭಾಗದ ಉಪ-ಡೀನ್ ಕಿರಣ್ ಎಸ್., ಪ್ರಾಧ್ಯಾಪಕಿ ಸಂಗೀತಾ ದೇವನಾಥನ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಭಾರ್ಗವಿ ಡಿ. ಹೆಮ್ಮಿಗೆ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-4-1334972566</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>