<p><strong>ಚೆನ್ನೈ</strong>: ಜನರಿಗೆ ಒಳ್ಳೆಯದು ಮಾಡಲು ರಾಜಕಾರಣಿಯೇ ಆಗಬೇಕಾಗಿಲ್ಲ, ಅಧಿಕಾರ ಇಲ್ಲದಿದ್ದರೂ ನಟನಾಗಿ ಗಳಿಸಿದ ಪ್ರೀತಿ, ಅಭಿಮಾನದಿಂದ ಸಹಕರಿಸಬಹುದು ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ.</p>.ಸ್ನೇಹಿತರ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ‘ಬಾಹುಬಲಿ‘ ನಟಿ ತಮನ್ನಾ ಭಾಟಿಯಾ.<p>ಚೆನ್ನೈನಲ್ಲಿ ಭಾನುವಾರ ನಡೆದ ‘45’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜಕುಮಾರ್ ಅವರು, ‘ನನಗೆ ರಾಜಕೀಯ ಅರ್ಥವಾಗಲ್ಲ. ಅಧಿಕಾರ ಅಥವಾ ಬಿರುದು ಇಲ್ಲದಿದ್ದರೂ ನಾನು ಬಡವರಿಗೆ ಸಹಾಯ ಮಾಡಲು ಬಯಸುತ್ತೇನೆ’ ಎಂದು ಹೇಳಿದ್ದಾರೆ. </p><p>ಈ ಕಾರ್ಯಕ್ರಮದಲ್ಲಿ ನಟ ಉಪೇಂದ್ರ, ರಾಜ್ ಬಿ ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ತಮಿಳು ನಟ ವಿಜಯ್ ಆ್ಯಂಟನಿ ಭಾಗಿಯಾಗಿದ್ದರು. </p><p>ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಉಪೆಂದ್ರ ಅವರು, ‘ಅರ್ಜುನ್ ಜನ್ಯ ಅವರ ‘45’ ಸಿನಿಮಾದ ಯೋಜನೆಯನ್ನು ನಿರ್ಮಾಪಕರಿಗೆ ತೋರಿಸಲು ಕೆಲವು ವರ್ಷಗಳ ಹಿಂದೆಯೇ ಅನಿಮೇಟೆಡ್ ಮತ್ತು ಹಿನ್ನಲೆ ಸಂಗೀತ ರಚಿಸಿದ್ದರು ಎಂದು ಜನ್ಯ ಅವರ ಕೆಲಸವನ್ನು ಕೊಂಡಾಡಿದ್ದಾರೆ.</p>.ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು.<p>ರಾಜ್ ಬಿ ಶೆಟ್ಟಿ ಅವರು ಮಾತನಾಡಿ, ‘ನಾನು ಒಬ್ಬ ನಿರ್ದೇಶಕನಾಗಿ ಕನ್ನಡದಲ್ಲಿ ಕೆಲವು ಸಿನಿಮಾಗಳನ್ನು ಮಾಡಿದ್ದೇನೆ. ಆದರೆ ಇವರೆಲ್ಲರೂ ಸಿನಿಮಾಕ್ಕಾಗಿ ಕೆಲಸ ಮಾಡುವುದನ್ನು ನೋಡಿದಾಗ ಸ್ವಲ್ಪ ಹೊಟ್ಟೆಕಿಚ್ಚು ಆಗುತ್ತದೆ. ಇವರಷ್ಟು ನಿಷ್ಠೆಯನ್ನು ನಾನು ತೋರಿಸುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.</p><p>ಅರ್ಜುನ್ ಜನ್ಯ ನಿರ್ದೇಶನದ ‘45’ ಚಿತ್ರವು ಡಿಸೆಂಬರ್ 25 ಕ್ರಿಸ್ಮಸ್ ಹಬ್ಬದಂದು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಈಗಾಗಲೇ ಬಿಡುಗಡೆಯಾಗಿರುವ ‘ಆಫ್ರೋ ಟಪಾಂಗ್’ ಹಾಡು ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಜನರಿಗೆ ಒಳ್ಳೆಯದು ಮಾಡಲು ರಾಜಕಾರಣಿಯೇ ಆಗಬೇಕಾಗಿಲ್ಲ, ಅಧಿಕಾರ ಇಲ್ಲದಿದ್ದರೂ ನಟನಾಗಿ ಗಳಿಸಿದ ಪ್ರೀತಿ, ಅಭಿಮಾನದಿಂದ ಸಹಕರಿಸಬಹುದು ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ.</p>.ಸ್ನೇಹಿತರ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ‘ಬಾಹುಬಲಿ‘ ನಟಿ ತಮನ್ನಾ ಭಾಟಿಯಾ.<p>ಚೆನ್ನೈನಲ್ಲಿ ಭಾನುವಾರ ನಡೆದ ‘45’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜಕುಮಾರ್ ಅವರು, ‘ನನಗೆ ರಾಜಕೀಯ ಅರ್ಥವಾಗಲ್ಲ. ಅಧಿಕಾರ ಅಥವಾ ಬಿರುದು ಇಲ್ಲದಿದ್ದರೂ ನಾನು ಬಡವರಿಗೆ ಸಹಾಯ ಮಾಡಲು ಬಯಸುತ್ತೇನೆ’ ಎಂದು ಹೇಳಿದ್ದಾರೆ. </p><p>ಈ ಕಾರ್ಯಕ್ರಮದಲ್ಲಿ ನಟ ಉಪೇಂದ್ರ, ರಾಜ್ ಬಿ ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ತಮಿಳು ನಟ ವಿಜಯ್ ಆ್ಯಂಟನಿ ಭಾಗಿಯಾಗಿದ್ದರು. </p><p>ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಉಪೆಂದ್ರ ಅವರು, ‘ಅರ್ಜುನ್ ಜನ್ಯ ಅವರ ‘45’ ಸಿನಿಮಾದ ಯೋಜನೆಯನ್ನು ನಿರ್ಮಾಪಕರಿಗೆ ತೋರಿಸಲು ಕೆಲವು ವರ್ಷಗಳ ಹಿಂದೆಯೇ ಅನಿಮೇಟೆಡ್ ಮತ್ತು ಹಿನ್ನಲೆ ಸಂಗೀತ ರಚಿಸಿದ್ದರು ಎಂದು ಜನ್ಯ ಅವರ ಕೆಲಸವನ್ನು ಕೊಂಡಾಡಿದ್ದಾರೆ.</p>.ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು.<p>ರಾಜ್ ಬಿ ಶೆಟ್ಟಿ ಅವರು ಮಾತನಾಡಿ, ‘ನಾನು ಒಬ್ಬ ನಿರ್ದೇಶಕನಾಗಿ ಕನ್ನಡದಲ್ಲಿ ಕೆಲವು ಸಿನಿಮಾಗಳನ್ನು ಮಾಡಿದ್ದೇನೆ. ಆದರೆ ಇವರೆಲ್ಲರೂ ಸಿನಿಮಾಕ್ಕಾಗಿ ಕೆಲಸ ಮಾಡುವುದನ್ನು ನೋಡಿದಾಗ ಸ್ವಲ್ಪ ಹೊಟ್ಟೆಕಿಚ್ಚು ಆಗುತ್ತದೆ. ಇವರಷ್ಟು ನಿಷ್ಠೆಯನ್ನು ನಾನು ತೋರಿಸುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.</p><p>ಅರ್ಜುನ್ ಜನ್ಯ ನಿರ್ದೇಶನದ ‘45’ ಚಿತ್ರವು ಡಿಸೆಂಬರ್ 25 ಕ್ರಿಸ್ಮಸ್ ಹಬ್ಬದಂದು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಈಗಾಗಲೇ ಬಿಡುಗಡೆಯಾಗಿರುವ ‘ಆಫ್ರೋ ಟಪಾಂಗ್’ ಹಾಡು ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>