ಮುಂಬೈ: ಬಾಲಿವುಡ್ ಗೀತ ರಚನೆಕಾರ, ಸಾಹಿತಿ ಜಾವೇದ್ ಅಖ್ತರ್ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನಟಿ ಕಂಗನಾ ರನೌತ್ ವೈಯಕ್ತಿಕ ಹಾಜರಾತಿಯಿಂದ ವಿನಾಯ್ತಿ ಕೋರಿದ್ದರು. ಅವರ ಅರ್ಜಿಯನ್ನು ಮಾನ್ಯ ಮಾಡಿರುವ ಬಾಂಬೆ ಹೈಕೋರ್ಟ್, ಸೆ. 20ಕ್ಕೆ ನಟಿ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಅವರ ವಿರುದ್ಧ ವಾರಂಟ್ ಹೊರಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.