ನಿರ್ಮಾಪಕಿ ಜಯಶ್ರೀದೇವಿ ಇನ್ನಿಲ್ಲ

ಬೆಂಗಳೂರು: ಕನ್ನಡ ಮತ್ತು ತೆಲುಗು ಚಿತ್ರರಂಗದ ನಿರ್ಮಾಪಕಿ ಜಯಶ್ರೀದೇವಿ(60) ಹೈದರಾಬಾದ್ನ ಅಪೋಲೊ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
‘ಭವಾನಿ', 'ನಮ್ಮೂರ ಮಂದಾರ ಹೂವೆ', 'ಅಮೃತ ವರ್ಷಿಣಿ', 'ಶ್ರೀಮಂಜುನಾಥ', 'ನಿಶ್ಯಬ್ಧ', 'ಹಬ್ಬ', 'ಸ್ನೇಹ ಲೋಕ' ಸೇರಿದಂತೆ ಕನ್ನಡದ ಹಲವು ಸ್ಟಾರ್ ನಟರ ಬಿಗ್ ಬಜೆಟ್ ಚಿತ್ರಗಳನ್ನು ಅವರು ನಿರ್ಮಿಸಿದ್ದರು.
ಮೂರು ವರ್ಷದ ಹಿಂದೆ ತೆರೆಕಂಡ ಸುದೀಪ್ ಮತ್ತು ಉಪೇಂದ್ರ ಅಭಿನಯದ ‘ಮುಕುಂದ ಮುರಾರಿ’ ಚಿತ್ರದ ಕಾರ್ಯಕಾರಿ ನಿರ್ಮಾಪಕಿಯಾಗಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.