<p>ಸೋಮವಾರಪೇಟೆ: ‘ಸೃಷ್ಟಿ ಸಿನಿಮಾಸ್ ಪ್ರೋಡಕ್ಷನ್ ವತಿಯಿಂದ ಕಾದಂಬರಿ ಆಧಾರಿತ ಚಿತ್ರ ‘ಜೇನುಬೇಲಿ’ ಸಿನಿಮಾದ ಮುಹೂರ್ತ ಏ.6ರಂದು ಪಟ್ಟಣದ ಸೋಮೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 10.30ಕ್ಕೆ ನೆರವೇರಲಿದೆ’ ಎಂದು ಚಿತ್ರ ನಿರ್ದೇಶಕಿ ರೂಪ ಮೋಹನ್ ತಿಳಿಸಿದರು.</p>.<p>ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಡಾ.ಮಂತರ್ ಗೌಡ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಚಿತ್ರೀಕರಣಕ್ಕೆ ಚಾಲನೆ ನೀಡಲಿದ್ದಾರೆ’ ಎಂದರು.</p>.<p>‘ಜೇನು ಕುರುಬರ ಜೀವನ ಚರಿತ್ರೆ ಆಧಾರಿತ ಮತ್ತು ಅವರ ನೋವು ನಲಿವುಗಳ ಕಥೆಯ ಕಲಾತ್ಮಕ ಸಿನಿಮಾ ಇದಾಗಿದ್ದು, ಕೊಡಗಿನಲ್ಲಿ ಚಿತ್ರಿಕರಿಸಲಾಗುವುದು’ ಎಂದು ತಿಳಿಸಿದರು.</p>.<p>‘ಗಿರಿಜನರ ಬಗೆಗಿನ ಪೂರ್ಣ ಪ್ರಮಾಣದ ಎರಡು ಗಂಟೆಯ ಚಿತ್ರವಾಗಿದೆ. ಗಿರಿಜನರ ಹಾಡಿಗಳಲ್ಲಿ ಅವಶ್ಯಕವಿರುವಷ್ಟು ಚಿತ್ರೀಕರಣ ಮಾಡಲಾಗುವುದು. ಚಿತ್ರದಲ್ಲಿ ಮೂರು ಹಾಡುಗಳಿರುತ್ತವೆ. ಒಂದು ಹಾಡಿಗೆ ಗಿರಿಜನರು ನುಡಿಸುವ ಸಂಗೀತ ಅಳವಡಿಸಿಕೊಳ್ಳಲಾಗುತ್ತದೆ’ ಎಂದರು.</p>.<p>ಗಿರಿಜನರು ಹಲವು ತಲೆಮಾರುಗಳಿಂದ ಪ್ರಕೃತಿಯೊಂದಿಗೆ ಜೀವನ ನಡೆಸುತ್ತಿದ್ದಾರೆ. ಇಂದಿಗೂ ಹೆಚ್ಚಿನವರು ಆಧುನಿಕತೆಯಿಂದ ದೂರ ಇದ್ದು, ಸೌಲಭ್ಯ ವಂಚಿತರಾಗಿದ್ದಾರೆ. ಇವರಿಗೂ ಎಲ್ಲರಂತೆ ಬದುಕುವ ಹಕ್ಕಿದ್ದು, ಶಿಕ್ಷಣ ಸಿಗಬೇಕಿದೆ. ಈ ನಿಟ್ಟಿನಲ್ಲಿ ಅವರ ಬದುಕು, ಅರೋಗ್ಯ, ಶಿಕ್ಷಣ, ಆಹಾರ ಪದ್ಧತಿ, ಸಂಪ್ರದಾಯಗಳು, ನೃತ್ಯ, ಹಬ್ಬ ಹರಿದಿನದಂತಹ ವಿಷಯಗಳ ಬಗ್ಗೆ ಬೆಳಕು ಚೆಲ್ಲಲಾಗುವುದು ಎಂದು ತಿಳಿಸಿದರು.</p>.<p>ಕಥೆ ಮತ್ತು ಚಿತ್ರಕಥೆ ಜೆ.ಎಂ.ಪ್ರಹ್ಲಾದ್, ಸಹಾಯಕ ನಿರ್ದೇಶನ ಶರತ್ ಬಿಳಿನೆಲೆ, ಛಾಯಗ್ರಾಹಣ ಸಂದೀಪ್ ಹೊನ್ನಾಳಿ, ಅದ್ವಿಕ್ ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂದರು.</p>.<p>ಕಲಾವಿದರಾದ ಶಶಿಕಿರಣ್, ಐಶ್ಚರ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-51-856843133</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ‘ಸೃಷ್ಟಿ ಸಿನಿಮಾಸ್ ಪ್ರೋಡಕ್ಷನ್ ವತಿಯಿಂದ ಕಾದಂಬರಿ ಆಧಾರಿತ ಚಿತ್ರ ‘ಜೇನುಬೇಲಿ’ ಸಿನಿಮಾದ ಮುಹೂರ್ತ ಏ.6ರಂದು ಪಟ್ಟಣದ ಸೋಮೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 10.30ಕ್ಕೆ ನೆರವೇರಲಿದೆ’ ಎಂದು ಚಿತ್ರ ನಿರ್ದೇಶಕಿ ರೂಪ ಮೋಹನ್ ತಿಳಿಸಿದರು.</p>.<p>ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಡಾ.ಮಂತರ್ ಗೌಡ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಚಿತ್ರೀಕರಣಕ್ಕೆ ಚಾಲನೆ ನೀಡಲಿದ್ದಾರೆ’ ಎಂದರು.</p>.<p>‘ಜೇನು ಕುರುಬರ ಜೀವನ ಚರಿತ್ರೆ ಆಧಾರಿತ ಮತ್ತು ಅವರ ನೋವು ನಲಿವುಗಳ ಕಥೆಯ ಕಲಾತ್ಮಕ ಸಿನಿಮಾ ಇದಾಗಿದ್ದು, ಕೊಡಗಿನಲ್ಲಿ ಚಿತ್ರಿಕರಿಸಲಾಗುವುದು’ ಎಂದು ತಿಳಿಸಿದರು.</p>.<p>‘ಗಿರಿಜನರ ಬಗೆಗಿನ ಪೂರ್ಣ ಪ್ರಮಾಣದ ಎರಡು ಗಂಟೆಯ ಚಿತ್ರವಾಗಿದೆ. ಗಿರಿಜನರ ಹಾಡಿಗಳಲ್ಲಿ ಅವಶ್ಯಕವಿರುವಷ್ಟು ಚಿತ್ರೀಕರಣ ಮಾಡಲಾಗುವುದು. ಚಿತ್ರದಲ್ಲಿ ಮೂರು ಹಾಡುಗಳಿರುತ್ತವೆ. ಒಂದು ಹಾಡಿಗೆ ಗಿರಿಜನರು ನುಡಿಸುವ ಸಂಗೀತ ಅಳವಡಿಸಿಕೊಳ್ಳಲಾಗುತ್ತದೆ’ ಎಂದರು.</p>.<p>ಗಿರಿಜನರು ಹಲವು ತಲೆಮಾರುಗಳಿಂದ ಪ್ರಕೃತಿಯೊಂದಿಗೆ ಜೀವನ ನಡೆಸುತ್ತಿದ್ದಾರೆ. ಇಂದಿಗೂ ಹೆಚ್ಚಿನವರು ಆಧುನಿಕತೆಯಿಂದ ದೂರ ಇದ್ದು, ಸೌಲಭ್ಯ ವಂಚಿತರಾಗಿದ್ದಾರೆ. ಇವರಿಗೂ ಎಲ್ಲರಂತೆ ಬದುಕುವ ಹಕ್ಕಿದ್ದು, ಶಿಕ್ಷಣ ಸಿಗಬೇಕಿದೆ. ಈ ನಿಟ್ಟಿನಲ್ಲಿ ಅವರ ಬದುಕು, ಅರೋಗ್ಯ, ಶಿಕ್ಷಣ, ಆಹಾರ ಪದ್ಧತಿ, ಸಂಪ್ರದಾಯಗಳು, ನೃತ್ಯ, ಹಬ್ಬ ಹರಿದಿನದಂತಹ ವಿಷಯಗಳ ಬಗ್ಗೆ ಬೆಳಕು ಚೆಲ್ಲಲಾಗುವುದು ಎಂದು ತಿಳಿಸಿದರು.</p>.<p>ಕಥೆ ಮತ್ತು ಚಿತ್ರಕಥೆ ಜೆ.ಎಂ.ಪ್ರಹ್ಲಾದ್, ಸಹಾಯಕ ನಿರ್ದೇಶನ ಶರತ್ ಬಿಳಿನೆಲೆ, ಛಾಯಗ್ರಾಹಣ ಸಂದೀಪ್ ಹೊನ್ನಾಳಿ, ಅದ್ವಿಕ್ ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂದರು.</p>.<p>ಕಲಾವಿದರಾದ ಶಶಿಕಿರಣ್, ಐಶ್ಚರ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-51-856843133</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>