<p>ರಾಜ್ಯದಲ್ಲಿ ಕೊರೊನಾ ಆರ್ಭಟ ತಗ್ಗುತ್ತಿರುವ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಚಟುವಟಿಕೆಗಳು ಗರಿಗೆದರುತ್ತಿವೆ. ಒಂದರಿಂದೊಂದು ಹೊಸ ಚಿತ್ರಗಳು ಸ್ಯಾಂಡಲ್ವುಡ್ ಅಂಗಳದಲ್ಲಿ ಸೆಟ್ಟೇರಲಾರಂಭಿಸಿವೆ. ನಟ ಜೆ.ಕೆ (ಜಯರಾಂ ಕಾರ್ತಿಕ್) ನಾಯಕನಾಗಿ ನಟಿಸುತ್ತಿರುವ ‘ಐರಾವನ್’ ಚಿತ್ರದ ಮುಹೂರ್ತ ಇತ್ತೀಚೆಗೆ ಗವಿಪುರಂನ ಕಾಲಭೈರವೇಶ್ವರ ದೇವಸ್ಥಾನದಲ್ಲಿ ನಡೆಯಿತು.</p>.<p>ಚಿತ್ರದ ಮೊದಲ ದೃಶ್ಯಕ್ಕೆ ನಿರಂತರ ಗಣೇಶ್ ಆರಂಭ ಫಲಕ ತೋರಿದರು. ತುಮಕೂರಿನ ಸಾಗರ ಸ್ವಾಮೀಜಿ ಕ್ಯಾಮೆರಾ ಚಾಲನೆ ನೀಡಿದರು.</p>.<p>ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಕಥೆಯ ಈ ಚಿತ್ರದಲ್ಲಿ ಜೆ.ಕೆ. ಅವರಿಗೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರೆ. ಅವಿನಾಶ್, ಕೃಷ್ಣ ಹೆಬ್ಬಾರ್ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಲಿದ್ದಾರೆ.</p>.<p>ರಾಮ್ಸ್ ರಂಗಾ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹಲವು ಚಿತ್ರಗಳಿಗೆ ಸಹ ಹಾಗೂ ಸಹಾಯಕ ನಿರ್ದೇಶಕರಾಗಿ ದುಡಿದಿರುವ ರಾಮ್ಸ್ ರಂಗಾ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಲು ಯೋಜನೆ ರೂಪಿಸಿದ್ದಾರೆ.</p>.<p>ದೇವೇಂದ್ರ ಛಾಯಾಗ್ರಹಣ, ಎಸ್.ಪ್ರದೀಪ್ ವರ್ಮ ಸಂಗೀತ ನಿರ್ದೇಶನ, ಕೆ.ಎಂ. ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನವಿದೆ. ನಿರಂತರ ಗಣೇಶ್ ತಮ್ಮ ನಿರಂತರ ಪ್ರೊಡಕ್ಷನ್ಸ್ ಮೂಲಕ ಈ ಚಿತ್ ನಿರ್ಮಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದಲ್ಲಿ ಕೊರೊನಾ ಆರ್ಭಟ ತಗ್ಗುತ್ತಿರುವ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಚಟುವಟಿಕೆಗಳು ಗರಿಗೆದರುತ್ತಿವೆ. ಒಂದರಿಂದೊಂದು ಹೊಸ ಚಿತ್ರಗಳು ಸ್ಯಾಂಡಲ್ವುಡ್ ಅಂಗಳದಲ್ಲಿ ಸೆಟ್ಟೇರಲಾರಂಭಿಸಿವೆ. ನಟ ಜೆ.ಕೆ (ಜಯರಾಂ ಕಾರ್ತಿಕ್) ನಾಯಕನಾಗಿ ನಟಿಸುತ್ತಿರುವ ‘ಐರಾವನ್’ ಚಿತ್ರದ ಮುಹೂರ್ತ ಇತ್ತೀಚೆಗೆ ಗವಿಪುರಂನ ಕಾಲಭೈರವೇಶ್ವರ ದೇವಸ್ಥಾನದಲ್ಲಿ ನಡೆಯಿತು.</p>.<p>ಚಿತ್ರದ ಮೊದಲ ದೃಶ್ಯಕ್ಕೆ ನಿರಂತರ ಗಣೇಶ್ ಆರಂಭ ಫಲಕ ತೋರಿದರು. ತುಮಕೂರಿನ ಸಾಗರ ಸ್ವಾಮೀಜಿ ಕ್ಯಾಮೆರಾ ಚಾಲನೆ ನೀಡಿದರು.</p>.<p>ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಕಥೆಯ ಈ ಚಿತ್ರದಲ್ಲಿ ಜೆ.ಕೆ. ಅವರಿಗೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರೆ. ಅವಿನಾಶ್, ಕೃಷ್ಣ ಹೆಬ್ಬಾರ್ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಲಿದ್ದಾರೆ.</p>.<p>ರಾಮ್ಸ್ ರಂಗಾ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹಲವು ಚಿತ್ರಗಳಿಗೆ ಸಹ ಹಾಗೂ ಸಹಾಯಕ ನಿರ್ದೇಶಕರಾಗಿ ದುಡಿದಿರುವ ರಾಮ್ಸ್ ರಂಗಾ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಲು ಯೋಜನೆ ರೂಪಿಸಿದ್ದಾರೆ.</p>.<p>ದೇವೇಂದ್ರ ಛಾಯಾಗ್ರಹಣ, ಎಸ್.ಪ್ರದೀಪ್ ವರ್ಮ ಸಂಗೀತ ನಿರ್ದೇಶನ, ಕೆ.ಎಂ. ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನವಿದೆ. ನಿರಂತರ ಗಣೇಶ್ ತಮ್ಮ ನಿರಂತರ ಪ್ರೊಡಕ್ಷನ್ಸ್ ಮೂಲಕ ಈ ಚಿತ್ ನಿರ್ಮಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>