‘ನಂಜುಂಡೇಗೌಡರು ರೈತ ಸಂಘದ ಪ್ರಾರಂಭದಲ್ಲಿ ಸಕ್ರಿಯವಾಗಿ ರೈತ ಸಂಘದ ಹೋರಾಟಗಳಲ್ಲಿ ಭಾಗವಹಿಸಿದ್ದರು. ಆಗಲೇ ರೈತ ಚಳವಳಿಯ ಬಗ್ಗೆ ಸಿನಿಮಾ ತೆಗೆದಿದ್ದರು. ಅಂದಿನಿಂದ ಅವರು ರೈತ ಚಳವಳಿಯ ಜೊತೆ ನಿಂತಿದ್ದಾರೆ. ಇವರ ‘ಸಂಕ್ರಾಂತಿ’, ‘ಚುಕ್ಕಿ ಚಂದ್ರಮ’, ‘ನೋಡುಬಾ ನಮ್ಮೂರ’ ಸಿನಿಮಾಗಳಿಗೆ ರಾಜ್ಯ ಪ್ರಶಸ್ತಿ, ‘ಹೆಬ್ಬೆಟ್ಟು ರಾಮಕ್ಕ’ ಸಿನಿಮಾಕ್ಕೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ದೊರಕಿದೆ. ಇವರು ನಿರ್ದೇಶಿಸಿದ ಎಲ್ಲಾ ಸಿನಿಮಾಗಳು ಗ್ರಾಮೀಣ ಬದುಕು, ಹಳ್ಳಿ ಜನರ ಸಂಸ್ಕೃತಿ, ರೈತರ ಜೀವನವನ್ನು ಆಧರಿಸಿವೆ.