<p>ಇತ್ತೀಚೆಗಷ್ಟೇ ‘ಕೆಡಿ’ ಚಿತ್ರದ ‘ಶಿವ ಶಿವ..’ ಹಾಡಿಗೆ ಧ್ವನಿಯಾಗಿದ್ದ ಗಾಯಕ ಕೈಲಾಶ್ ಖೇರ್ ಕನ್ನಡದಲ್ಲಿ ಹಲವು ಹಿಟ್ ಹಾಡುಗಳನ್ನು ನೀಡಿದ್ದಾರೆ. ಇದೀಗ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಚಿತ್ರದ ಹಾಡೊಂದಕ್ಕೆ ಅವರು ದನಿಯಾಗಿದ್ದಾರೆ. </p>.<p>ಕಂಬಳ ಕ್ರೀಡೆಯನ್ನು ಆಧರಿಸಿದ ಈ ಸಿನಿಮಾವನ್ನು ಅರುಣ್ ರೈ ತೋಡಾರ್ ನಿರ್ಮಾಣ ಮಾಡಿದ್ದು, ಚಿತ್ರವು ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಮೂಡಿಬರುತ್ತಿದೆ. ತುಳುವಿನಲ್ಲಿ ‘ಬಿರ್ದುದ ಕಂಬಳ’ ಎಂಬ ಶೀರ್ಷಿಕೆಯಲ್ಲಿ ಈ ಸಿನಿಮಾ ಬರುತ್ತಿದೆ. ‘ಈ ಸಿನಿಮಾ ಮಣ್ಣಿನ ಕಥೆಯನ್ನು ಹೊಂದಿದೆ. ಸಾಂಸ್ಕೃತಿಕ ವಿಷಯವನ್ನು ಹೊಂದಿರುವ ಈ ಚಿತ್ರವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸಿದ್ದಾರೆ. ಹಾಡನ್ನು ಮಣಿಕಾಂತ್ ಕದ್ರಿ ಅತ್ಯುತ್ತಮವಾಗಿ ಸಂಯೋಜಿಸಿದ್ದಾರೆ. ರಘು ಶಾಸ್ತ್ರಿ ಅವರ ಸಾಹಿತ್ಯವೂ ಅದ್ಭುತವಾಗಿದೆ’ ಎಂದಿದ್ದಾರೆ ಕೈಲಾಶ್ ಖೇರ್. </p>.<p>ಚಿತ್ರಕ್ಕೆ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಆರ್. ಗಿರಿ ಛಾಯಾಚಿತ್ರಗ್ರಹಣ, ಶ್ರೀನಿವಾಸ್ ಪಿ.ಬಾಬು ಸಂಕಲನ, ಮದನ್-ಹರಿಣಿ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ, ಮಾಸ್ ಮಾದ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಆದಿತ್ಯ, ಪ್ರಕಾಶ್ ರಾಜ್, ರವಿಶಂಕರ್, ಶೋಭರಾಜ್, ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇತ್ತೀಚೆಗಷ್ಟೇ ‘ಕೆಡಿ’ ಚಿತ್ರದ ‘ಶಿವ ಶಿವ..’ ಹಾಡಿಗೆ ಧ್ವನಿಯಾಗಿದ್ದ ಗಾಯಕ ಕೈಲಾಶ್ ಖೇರ್ ಕನ್ನಡದಲ್ಲಿ ಹಲವು ಹಿಟ್ ಹಾಡುಗಳನ್ನು ನೀಡಿದ್ದಾರೆ. ಇದೀಗ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಚಿತ್ರದ ಹಾಡೊಂದಕ್ಕೆ ಅವರು ದನಿಯಾಗಿದ್ದಾರೆ. </p>.<p>ಕಂಬಳ ಕ್ರೀಡೆಯನ್ನು ಆಧರಿಸಿದ ಈ ಸಿನಿಮಾವನ್ನು ಅರುಣ್ ರೈ ತೋಡಾರ್ ನಿರ್ಮಾಣ ಮಾಡಿದ್ದು, ಚಿತ್ರವು ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಮೂಡಿಬರುತ್ತಿದೆ. ತುಳುವಿನಲ್ಲಿ ‘ಬಿರ್ದುದ ಕಂಬಳ’ ಎಂಬ ಶೀರ್ಷಿಕೆಯಲ್ಲಿ ಈ ಸಿನಿಮಾ ಬರುತ್ತಿದೆ. ‘ಈ ಸಿನಿಮಾ ಮಣ್ಣಿನ ಕಥೆಯನ್ನು ಹೊಂದಿದೆ. ಸಾಂಸ್ಕೃತಿಕ ವಿಷಯವನ್ನು ಹೊಂದಿರುವ ಈ ಚಿತ್ರವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸಿದ್ದಾರೆ. ಹಾಡನ್ನು ಮಣಿಕಾಂತ್ ಕದ್ರಿ ಅತ್ಯುತ್ತಮವಾಗಿ ಸಂಯೋಜಿಸಿದ್ದಾರೆ. ರಘು ಶಾಸ್ತ್ರಿ ಅವರ ಸಾಹಿತ್ಯವೂ ಅದ್ಭುತವಾಗಿದೆ’ ಎಂದಿದ್ದಾರೆ ಕೈಲಾಶ್ ಖೇರ್. </p>.<p>ಚಿತ್ರಕ್ಕೆ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಆರ್. ಗಿರಿ ಛಾಯಾಚಿತ್ರಗ್ರಹಣ, ಶ್ರೀನಿವಾಸ್ ಪಿ.ಬಾಬು ಸಂಕಲನ, ಮದನ್-ಹರಿಣಿ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ, ಮಾಸ್ ಮಾದ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಆದಿತ್ಯ, ಪ್ರಕಾಶ್ ರಾಜ್, ರವಿಶಂಕರ್, ಶೋಭರಾಜ್, ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>