ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಲಚಕ್ರ’ದ ಮಹಿಮೆ

Last Updated 30 ಜುಲೈ 2020, 5:33 IST
ಅಕ್ಷರ ಗಾತ್ರ

ನಿರ್ದೇಶಕ ಸುಮಂತ್‌ ಕ್ರಾಂತಿ ಮತ್ತು ನಟ ವಸಿಷ್ಠ ಸಿಂಹ ಕಾಂಬಿನೇಷನ್‌ನಡಿ ನಿರ್ಮಾಣವಾಗಿರುವ ‘ಕಾಲಚಕ್ರ’ ಸೈಕಲಾಜಿಕಲ್‌ ಕಥಾಹಂದರ ಹೊಂದಿರುವ ಚಿತ್ರ. ಈಗಾಗಲೇ, ಇದರ ಶೂಟಿಂಗ್ ಪೂರ್ಣಗೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ‘ಇಂಡಿಯಾ ವರ್ಸಸ್‌ ಇಂಗ್ಲೆಂಡ್‌’ ಚಿತ್ರದ ಬಳಿಕ ವಸಿಷ್ಠ ಸಿಂಹ ನಾಯಕ ನಟನಾಗಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ಎರಡನೇ ಚಿತ್ರ ಇದು.

ಮೂರು ದಶಕದ ಹಿಂದೆ ಕನ್ನಡದಲ್ಲಿ ‘ಕಾಲಚಕ್ರ’ ಹೆಸರಿನ ಸಿನಿಮಾವೊಂದು ತೆರೆಕಂಡಿತ್ತು. ಅಂಬರೀಷ್‌, ದೀಪಿಕಾ ನಟಿಸಿದ್ದ ಈ ಸಿನಿಮಾಕ್ಕೆ ಡಿ. ರಾಜೇಂದ್ರ ಬಾಬು ಆ್ಯಕ್ಷನ್‌ ಕಟ್‌ ಹೇಳಿದ್ದರು. ಆದರೆ, ಹಳೆಯ ಸಿನಿಮಾಕ್ಕೂ ಮತ್ತು ಈ ‘ಕಾಲಚಕ್ರ’ದ ಕಥೆಗೆ ಯಾವುದೇ ಸಂಬಂಧವಿಲ್ಲ ಎನ್ನುವುದು ಚಿತ್ರತಂಡದ ಸ್ಪಷ್ಟನೆ.

‘ಕಾಲಚಕ್ರ’ ಚಿತ್ರದಲ್ಲಿ ವಸಿಷ್ಠ ಸಿಂಹ25 ವರ್ಷದ ಯುವಕ ಹಾಗೂ 60 ವರ್ಷದ ವೃದ್ಧನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸಾಫ್ಟ್‌ವೇರ್ ಎಂಜಿನಿಯರ್‌ ಕುಟುಂಬವೊಂದರಲ್ಲಿ ನಡೆಯುವ ಕಥೆ ಇದಾಗಿದೆ. ಕಳೆದ ವರ್ಷದ ಅಂತ್ಯದಲ್ಲಿಯೇ ಸಿನಿಮಾ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿತ್ತು. ರಾಜ್ಯ ಸರ್ಕಾರದ ಮಾರ್ಗಸೂಚಿ ನೋಡಿಕೊಂಡು ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿದೆ. ಬೆಂಗಳೂರು ಮತ್ತು ಮಂಗಳೂರು ಸುತ್ತಮುತ್ತ ಇದರ ಚಿತ್ರೀಕರಣ ನಡೆದಿದೆ.

ಈ ಚಿತ್ರದ ‘ತರಗೆಲೆ...’ ಹಾಡು ಜುಲೈ 31ರ ವರಮಹಾಲಕ್ಷ್ಮಿ ಹಬ್ಬದಂದು ಸಂಜೆ 6ಗಂಟೆಗೆ ಆನಂದ್ ಆಡಿಯೊದಲ್ಲಿ ಬಿಡುಗಡೆಯಾಗಲಿದೆ. ಸಂತೋಷ್ ನಾಯಕ್ ರಚಿಸಿರುವ ಈ ಹಾಡಿಗೆ ಗಾಯಕ ಕೈಲಾಶ್‌ ಕೇರ್ ಧ್ವನಿಯಾಗಿದ್ದಾರೆ. ಲಾಕ್‌ಡೌನ್‌ಗೂ ಮೊದಲೇ ನಟ ಸುದೀಪ್‌ ಈ ಚಿತ್ರದ ಟೀಸರ್ ಬಿಡುಗಡೆಗೊಳಿಸಿ ಮೆಚ್ಚುಗೆ ಸೂಚಿಸಿದ್ದರು.

ಕೊಡಗು ಮೂಲದ ರಕ್ಷಾ ಇದರ ನಾಯಕಿ. ಚಿತ್ರದ ಮೂರು ಹಾಡುಗಳಿಗೆ ಗುರುಕಿರಣ್‌ ಸಂಗೀತ ಸಂಯೋಜಿಸಿದ್ದಾರೆ. ರಶ್ಮಿ ಕೆ. ಬಂಡವಾಳ ಹೂಡಿದ್ದಾರೆ. ಛಾಯಾಗ್ರಹಣ ಎಲ್‌.ಎಂ. ಸೂರಿ ಅವರದು. ಆವಿಕಾ ರಾಠೋಡ್‌, ರಾಜ್‌ ದಿಲೀಪ್‌ ಶೆಟ್ಟಿ, ಸುಚೇಂದ್ರಪ್ರಸಾದ್, ಹನುಮಂತೇಗೌಡ ತಾರಾಗಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT