<p>‘ಕಾಲಚಕ್ರ’ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ಸಿನಿಮಾ. ಈಗಾಗಲೇ, ಇದರ ಚಿತ್ರೀಕರಣವೂ ಪೂರ್ಣಗೊಂಡಿದೆ. ಖಳನಟನಾಗಿಯೇ ಗುರುತಿಸಿಕೊಂಡಿರುವ ವಸಿಷ್ಠ ಸಿಂಹ ಇದರ ನಾಯಕ. ಅಂದಹಾಗೆ ಇದಕ್ಕೆ ಆ್ಯಕ್ಷನ್ ಕಟ್ ಹೇಳಿರುವುದು ಸುಮಂತ್ ಕ್ರಾಂತಿ.</p>.<p>ವಸಿಷ್ಠ ಸಿಂಹ ಇದರಲ್ಲಿ 25ರಿಂದ 60 ವಯೋಮಾನದ ನಾಲ್ಕು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರಂತೆ. ಲಾಕ್ಡೌನ್ಗೂ ಮೊದಲೇ ನಟ ಸುದೀಪ್ ಇದರ ಟೀಸರ್ ಬಿಡುಗಡೆಗೊಳಿಸಿದ್ದರು. ಇದಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿತ್ತು. ಈಗ ಮತ್ತೊಂದು ವಿಭಿನ್ನ ಬಗೆಯ ಟೀಸರ್ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ.</p>.<p>ಎರಡು ವರ್ಷದ ಹಿಂದೆಯೇ ಇದರ ಮುಕ್ಕಾಲು ಭಾಗದಷ್ಟು ಶೂಟಿಂಗ್ ಪೂರ್ಣಗೊಂಡಿತ್ತು. ಬಾಕಿ ಉಳಿದಿರುವ ಚಿತ್ರೀಕರಣವನ್ನು ಪೂರ್ಣಗೊಳಿಸಿರುವ ಚಿತ್ರತಂಡ ಸಿನಿಮಾ ಬಿಡುಗಡೆಗೆ ಚಿತ್ರಮಂದಿರಗಳ ಪುನರಾರಂಭವನ್ನೇ ಎದುರು ನೋಡುತ್ತಿದೆ.</p>.<p>ಬೆಂಗಳೂರು ಮತ್ತು ಮಂಗಳೂರಿನ ಸುತ್ತಮುತ್ತ ಇದರ ಶೂಟಿಂಗ್ ನಡೆಸಲಾಗಿದೆ. ರಶ್ಮಿ ಫಿಲಂಸ್ ಲಾಂಛನದಡಿ ಇದಕ್ಕೆ ಬಂಡವಾಳ ಹೂಡಲಾಗಿದೆ. ಚೇತನ್ ಕುಮಾರ್, ಕವಿರಾಜ್, ಸಂತೋಷ್ ನಾಯಕ್ ಬರೆದಿರುವ ಹಾಡುಗಳಿಗೆ ಗುರುಕಿರಣ್ ಸಂಗೀತ ಸಂಯೋಜಿಸಿದ್ದಾರೆ. ಸಂಚಿತ್ ಹೆಗ್ಡೆ, ಕೈಲಾಶ್ ಖೇರ್, ಪಂಚಮ್ ಧ್ವನಿಯಾಗಿದ್ದಾರೆ.</p>.<p>ಎಲ್.ಎಂ. ಸೂರಿ ಅವರ ಛಾಯಾಗ್ರಹಣವಿದೆ. ಸೌಂದರ್ ರಾಜ್ ಸಂಕಲನ ನಿರ್ವಹಿಸಿದ್ದಾರೆ. ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನವಿದೆ. ಮುರಳಿ ನೃತ್ಯ ನಿರ್ದೇಶಿಸಿದ್ದಾರೆ. ಬಿ.ಎ. ಮಧು ಸಂಭಾಷಣೆ ಬರೆದಿದ್ದಾರೆ. ಆವಿಕಾ ರಾಠೋಡ್, ರಾಜ್ ದಿಲೀಪ್ ಶೆಟ್ಟಿ, ಸುಚೇಂದ್ರಪ್ರಸಾದ್, ಹನುಮಂತೇಗೌಡ ತಾರಾಗಣದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಕಾಲಚಕ್ರ’ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ಸಿನಿಮಾ. ಈಗಾಗಲೇ, ಇದರ ಚಿತ್ರೀಕರಣವೂ ಪೂರ್ಣಗೊಂಡಿದೆ. ಖಳನಟನಾಗಿಯೇ ಗುರುತಿಸಿಕೊಂಡಿರುವ ವಸಿಷ್ಠ ಸಿಂಹ ಇದರ ನಾಯಕ. ಅಂದಹಾಗೆ ಇದಕ್ಕೆ ಆ್ಯಕ್ಷನ್ ಕಟ್ ಹೇಳಿರುವುದು ಸುಮಂತ್ ಕ್ರಾಂತಿ.</p>.<p>ವಸಿಷ್ಠ ಸಿಂಹ ಇದರಲ್ಲಿ 25ರಿಂದ 60 ವಯೋಮಾನದ ನಾಲ್ಕು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರಂತೆ. ಲಾಕ್ಡೌನ್ಗೂ ಮೊದಲೇ ನಟ ಸುದೀಪ್ ಇದರ ಟೀಸರ್ ಬಿಡುಗಡೆಗೊಳಿಸಿದ್ದರು. ಇದಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿತ್ತು. ಈಗ ಮತ್ತೊಂದು ವಿಭಿನ್ನ ಬಗೆಯ ಟೀಸರ್ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ.</p>.<p>ಎರಡು ವರ್ಷದ ಹಿಂದೆಯೇ ಇದರ ಮುಕ್ಕಾಲು ಭಾಗದಷ್ಟು ಶೂಟಿಂಗ್ ಪೂರ್ಣಗೊಂಡಿತ್ತು. ಬಾಕಿ ಉಳಿದಿರುವ ಚಿತ್ರೀಕರಣವನ್ನು ಪೂರ್ಣಗೊಳಿಸಿರುವ ಚಿತ್ರತಂಡ ಸಿನಿಮಾ ಬಿಡುಗಡೆಗೆ ಚಿತ್ರಮಂದಿರಗಳ ಪುನರಾರಂಭವನ್ನೇ ಎದುರು ನೋಡುತ್ತಿದೆ.</p>.<p>ಬೆಂಗಳೂರು ಮತ್ತು ಮಂಗಳೂರಿನ ಸುತ್ತಮುತ್ತ ಇದರ ಶೂಟಿಂಗ್ ನಡೆಸಲಾಗಿದೆ. ರಶ್ಮಿ ಫಿಲಂಸ್ ಲಾಂಛನದಡಿ ಇದಕ್ಕೆ ಬಂಡವಾಳ ಹೂಡಲಾಗಿದೆ. ಚೇತನ್ ಕುಮಾರ್, ಕವಿರಾಜ್, ಸಂತೋಷ್ ನಾಯಕ್ ಬರೆದಿರುವ ಹಾಡುಗಳಿಗೆ ಗುರುಕಿರಣ್ ಸಂಗೀತ ಸಂಯೋಜಿಸಿದ್ದಾರೆ. ಸಂಚಿತ್ ಹೆಗ್ಡೆ, ಕೈಲಾಶ್ ಖೇರ್, ಪಂಚಮ್ ಧ್ವನಿಯಾಗಿದ್ದಾರೆ.</p>.<p>ಎಲ್.ಎಂ. ಸೂರಿ ಅವರ ಛಾಯಾಗ್ರಹಣವಿದೆ. ಸೌಂದರ್ ರಾಜ್ ಸಂಕಲನ ನಿರ್ವಹಿಸಿದ್ದಾರೆ. ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನವಿದೆ. ಮುರಳಿ ನೃತ್ಯ ನಿರ್ದೇಶಿಸಿದ್ದಾರೆ. ಬಿ.ಎ. ಮಧು ಸಂಭಾಷಣೆ ಬರೆದಿದ್ದಾರೆ. ಆವಿಕಾ ರಾಠೋಡ್, ರಾಜ್ ದಿಲೀಪ್ ಶೆಟ್ಟಿ, ಸುಚೇಂದ್ರಪ್ರಸಾದ್, ಹನುಮಂತೇಗೌಡ ತಾರಾಗಣದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>