<p>ಕಳಸ: ನಟಿ ಮಾನ್ವಿತಾ ಕಾಮತ್ ಬುಧವಾರ ಮೈಸೂರು ಮೂಲದ ಸಂಗೀತ ನಿರ್ಮಾಪಕ ಅರುಣ್ ಅವರ ಜೊತೆ ಹಸೆಮಣೆ ಏರಿದರು.</p>.<p>ಪಟ್ಟಣದ ಬೈನೆಕಾಡು ರೆಸಾರ್ಟ್ನಲ್ಲಿ ಸೋಮವಾರ ಮೆಹಂದಿ ಮತ್ತು ಹಳದಿ ಶಾಸ್ತ್ರ ನಡೆದಿತ್ತು. ಮೇಲಂಗಡಿ ವೆಂಕಟರಮಣ ದೇಗುಲದ ಜಿಎಸ್ಬಿ ಭವನದಲ್ಲಿ ಮಂಗಳವಾರ ಕೊಂಕಣಿ ಸಂಪ್ರದಾಯದಂತೆ ಫೂಲ್ ಮಡ್ಡಿ ಹಾಗೂ ಬುಧವಾರ ವಿವಾಹ ನಡೆಯಿತು.</p>.<p>ಪಟ್ಟಣದ ಕೆನರಾ ಬ್ಯಾಂಕ್ ಉದ್ಯೋಗಿ ಆಗಿದ್ದ ಹರೀಶ್ ಕಾಮತ್ ಮತ್ತು ಸುಜಾತಾ ಕಾಮತ್ ದಂಪತಿಯ ಪುತ್ರಿ ಮಾನ್ವಿತಾ, ಕಳಸದ ಪರಿಸರದಲ್ಲೇ ಬಾಲ್ಯ ಮತ್ತು ಪ್ರೌಢಶಾಲೆವರೆಗಿನ ಶಿಕ್ಷಣ ಪಡೆದಿದ್ದರು.</p>.<p>ಮಂಗಳೂರಿನಲ್ಲಿ ಪದವಿ ಪಡೆದ ಇವರು, ಕೆಲಕಾಲ ರೇಡಿಯೊ ಜಾಕಿ ಆಗಿದ್ದರು. ಸೂರಿ ನಿರ್ದೇಶನದ ‘ಕೆಂಡಸಂಪಿಗೆ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ಟಗರು’, ‘ಚೌಕ’ ಮುಂತಾದ ಚಿತ್ರಗಳಲ್ಲೂ ನಟಿಸಿದ್ದಾರೆ. ಸದ್ಯ ಮರಾಠಿ ಮತ್ತು ಹಿಂದಿ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.</p>.<p>ನಟಿಯರಾದ ಶ್ರುತಿ ಹರಿಹರನ್, ನಿಧಿ ಸುಬ್ಬಯ್ಯ, ಬಾಲಿವುಡ್ ನಿರ್ದೇಶಕ ವಿಕಾಸ್ ಬೆಹ್ಲ್ ಮತ್ತಿತರ ಗಣ್ಯರು ವಿವಾಹಕ್ಕೆ ಸಾಕ್ಷಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಳಸ: ನಟಿ ಮಾನ್ವಿತಾ ಕಾಮತ್ ಬುಧವಾರ ಮೈಸೂರು ಮೂಲದ ಸಂಗೀತ ನಿರ್ಮಾಪಕ ಅರುಣ್ ಅವರ ಜೊತೆ ಹಸೆಮಣೆ ಏರಿದರು.</p>.<p>ಪಟ್ಟಣದ ಬೈನೆಕಾಡು ರೆಸಾರ್ಟ್ನಲ್ಲಿ ಸೋಮವಾರ ಮೆಹಂದಿ ಮತ್ತು ಹಳದಿ ಶಾಸ್ತ್ರ ನಡೆದಿತ್ತು. ಮೇಲಂಗಡಿ ವೆಂಕಟರಮಣ ದೇಗುಲದ ಜಿಎಸ್ಬಿ ಭವನದಲ್ಲಿ ಮಂಗಳವಾರ ಕೊಂಕಣಿ ಸಂಪ್ರದಾಯದಂತೆ ಫೂಲ್ ಮಡ್ಡಿ ಹಾಗೂ ಬುಧವಾರ ವಿವಾಹ ನಡೆಯಿತು.</p>.<p>ಪಟ್ಟಣದ ಕೆನರಾ ಬ್ಯಾಂಕ್ ಉದ್ಯೋಗಿ ಆಗಿದ್ದ ಹರೀಶ್ ಕಾಮತ್ ಮತ್ತು ಸುಜಾತಾ ಕಾಮತ್ ದಂಪತಿಯ ಪುತ್ರಿ ಮಾನ್ವಿತಾ, ಕಳಸದ ಪರಿಸರದಲ್ಲೇ ಬಾಲ್ಯ ಮತ್ತು ಪ್ರೌಢಶಾಲೆವರೆಗಿನ ಶಿಕ್ಷಣ ಪಡೆದಿದ್ದರು.</p>.<p>ಮಂಗಳೂರಿನಲ್ಲಿ ಪದವಿ ಪಡೆದ ಇವರು, ಕೆಲಕಾಲ ರೇಡಿಯೊ ಜಾಕಿ ಆಗಿದ್ದರು. ಸೂರಿ ನಿರ್ದೇಶನದ ‘ಕೆಂಡಸಂಪಿಗೆ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ಟಗರು’, ‘ಚೌಕ’ ಮುಂತಾದ ಚಿತ್ರಗಳಲ್ಲೂ ನಟಿಸಿದ್ದಾರೆ. ಸದ್ಯ ಮರಾಠಿ ಮತ್ತು ಹಿಂದಿ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.</p>.<p>ನಟಿಯರಾದ ಶ್ರುತಿ ಹರಿಹರನ್, ನಿಧಿ ಸುಬ್ಬಯ್ಯ, ಬಾಲಿವುಡ್ ನಿರ್ದೇಶಕ ವಿಕಾಸ್ ಬೆಹ್ಲ್ ಮತ್ತಿತರ ಗಣ್ಯರು ವಿವಾಹಕ್ಕೆ ಸಾಕ್ಷಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>