ಸ್ವದೇಶಿ ಹಾಗೂ ಪಾಶ್ಚಾತ್ಯ ನೃತ್ಯಗಳ ನಡುವಿನ ಪೈಪೋಟಿಯ ಮೇಲೆ ಈ ಚಿತ್ರದ ಕಥೆ ನಡೆಯುತ್ತದೆ. ಅನಾಥ ಮಕ್ಕಳಿಗೆ ನೃತ್ಯ ಹೇಳಿಕೊಡುವ ಶಿಕ್ಷಕನ ಪಾತ್ರದಲ್ಲಿ ಕಾಳಿಮಠದ ರಿಶಿಕುಮಾರ ಸ್ವಾಮೀಜಿ ಅವರು ಕಾಣಿಸಿಕೊಂಡಿದ್ದಾರೆ. ನೂರೈವತ್ತಕ್ಕೂ ಅಧಿಕ ಮಕ್ಕಳು ಚಿತ್ರದಲ್ಲಿ ನಟಿಸಿದ್ದಾರೆ. ಶಮ್ಯ ಗುಬ್ಬಿ, ಬೇಬಿ ಸ್ಪೂರ್ತಿ, ಮಹೇಶರಾಜ್, ಮಾ.ಸುಶೀಲ್, ಹರ್ಷ, ಯುಕ್ತ, ವೆಂಕಟೇಶ್, ಮನೋಜ್ ವರ್ಮ, ಹೇಮ, ಅಂಜು, ಶ್ರದ್ಧಾ, ಹರ್ಷ ಚೆಲುವರಾಜ್ ನಟಿಸಿದ್ದಾರೆ.