<p><strong>ಚೆನ್ನೈ</strong>: ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ, ‘ಥಗ್ ಲೈಫ್’ ಚಿತ್ರತಂಡದೊಂದಿಗೆ ಬುಧವಾರ ವೇದಿಕೆ ಹಂಚಿಕೊಂಡ ನಟ ಕಮಲ್ ಹಾಸನ್, ತಮಿಳು–ಕನ್ನಡ ಭಾಷಾ ವಿವಾದ ಕುರಿತಂತೆ ಮಾತನಾಡಲಿಲ್ಲ.</p>.<p>‘ನನ್ನ ಬೆನ್ನಿಗೆ ನಿಂತ ತಮಿಳುನಾಡಿಗೆ ಧನ್ಯವಾದ’ ಎಂದು ಕಮಲ್ ಹಾಸನ್ ಹೇಳಿದರು. ‘ತಮಿಳಿನಿಂದ ಕನ್ನಡ ಹುಟ್ಟಿದೆ’ ಎಂಬ ಅವರ ಹೇಳಿಕೆ ವಿವಾದಕ್ಕೀಡಾಗಿದ್ದು, ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ. ಹೀಗಾಗಿ, ಅವರ ಈ ಹೇಳಿಕೆಗೆ ಮಹತ್ವ ಬಂದಿದೆ.</p>.<p>ನಟ ಸಿಲಂಬರಸನ್ ಸೇರಿದಂತೆ ಚಿತ್ರದ ನಟ–ನಟಿಯರು ವೇದಿಕೆಯಲ್ಲಿದ್ದರು. ಕನ್ನಡ ಕುರಿತ ಹೇಳಿಕೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಅವರನ್ನು ತರಾಟೆಗೆ ತೆಗೆದುಕೊಂಡ ನಂತರ ಕಮಲ್ ಹಾಸನ್ ಇದೇ ಮೊದಲ ಬಾರಿಗೆ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.</p>.<p>‘ಚಿತ್ರತಂಡ ಬಹಳ ಶ್ರಮಪಟ್ಟಿದೆ. ತಾಂತ್ರಿಕ ಸಿಬ್ಬಂದಿ ಶ್ರಮದಿಂದ ಚಿತ್ರವು ಅಂತರರಾಷ್ಟ್ರೀಯ ಗುಣಮಟ್ಟದಿಂದ ಕೂಡಿದೆ’ ಎಂದರು.</p>.<p>ಚಿತ್ರ ನಿರ್ದೇಶಕ ಮಣಿರತ್ನಂ ಅವರನ್ನು ಹೊಗಳಿದ ಅವರು, ‘ಮಣಿರತ್ನಂ ಅವರು ‘ಸಿನಿಮಾ ಜ್ಞಾನಿ’ಯಾಗಿ ಹೊರಹೊಮ್ಮಿದ್ದಾರೆ. ಅವರೊಂದಿಗೆ ಕೆಲಸ ಮಾಡಲು ನಾನು ಉತ್ಸುಕವಾಗಿದ್ದೇನೆ’ ಎಂದು ಹೇಳಿದರು.</p>.<p>ಚಿತ್ರವು ಜೂನ್ 5ರಂದು ಬಿಡುಗಡೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ, ‘ಥಗ್ ಲೈಫ್’ ಚಿತ್ರತಂಡದೊಂದಿಗೆ ಬುಧವಾರ ವೇದಿಕೆ ಹಂಚಿಕೊಂಡ ನಟ ಕಮಲ್ ಹಾಸನ್, ತಮಿಳು–ಕನ್ನಡ ಭಾಷಾ ವಿವಾದ ಕುರಿತಂತೆ ಮಾತನಾಡಲಿಲ್ಲ.</p>.<p>‘ನನ್ನ ಬೆನ್ನಿಗೆ ನಿಂತ ತಮಿಳುನಾಡಿಗೆ ಧನ್ಯವಾದ’ ಎಂದು ಕಮಲ್ ಹಾಸನ್ ಹೇಳಿದರು. ‘ತಮಿಳಿನಿಂದ ಕನ್ನಡ ಹುಟ್ಟಿದೆ’ ಎಂಬ ಅವರ ಹೇಳಿಕೆ ವಿವಾದಕ್ಕೀಡಾಗಿದ್ದು, ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ. ಹೀಗಾಗಿ, ಅವರ ಈ ಹೇಳಿಕೆಗೆ ಮಹತ್ವ ಬಂದಿದೆ.</p>.<p>ನಟ ಸಿಲಂಬರಸನ್ ಸೇರಿದಂತೆ ಚಿತ್ರದ ನಟ–ನಟಿಯರು ವೇದಿಕೆಯಲ್ಲಿದ್ದರು. ಕನ್ನಡ ಕುರಿತ ಹೇಳಿಕೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಅವರನ್ನು ತರಾಟೆಗೆ ತೆಗೆದುಕೊಂಡ ನಂತರ ಕಮಲ್ ಹಾಸನ್ ಇದೇ ಮೊದಲ ಬಾರಿಗೆ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.</p>.<p>‘ಚಿತ್ರತಂಡ ಬಹಳ ಶ್ರಮಪಟ್ಟಿದೆ. ತಾಂತ್ರಿಕ ಸಿಬ್ಬಂದಿ ಶ್ರಮದಿಂದ ಚಿತ್ರವು ಅಂತರರಾಷ್ಟ್ರೀಯ ಗುಣಮಟ್ಟದಿಂದ ಕೂಡಿದೆ’ ಎಂದರು.</p>.<p>ಚಿತ್ರ ನಿರ್ದೇಶಕ ಮಣಿರತ್ನಂ ಅವರನ್ನು ಹೊಗಳಿದ ಅವರು, ‘ಮಣಿರತ್ನಂ ಅವರು ‘ಸಿನಿಮಾ ಜ್ಞಾನಿ’ಯಾಗಿ ಹೊರಹೊಮ್ಮಿದ್ದಾರೆ. ಅವರೊಂದಿಗೆ ಕೆಲಸ ಮಾಡಲು ನಾನು ಉತ್ಸುಕವಾಗಿದ್ದೇನೆ’ ಎಂದು ಹೇಳಿದರು.</p>.<p>ಚಿತ್ರವು ಜೂನ್ 5ರಂದು ಬಿಡುಗಡೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>