ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಕಂಗನಾ: 'ಮಹಾರಾಜ್’ ಎಂದು ಬಣ್ಣನೆ

Last Updated 2 ಮೇ 2022, 9:35 IST
ಅಕ್ಷರ ಗಾತ್ರ

ಲಖನೌ: ಬಾಲಿವುಡ್ ನಟಿ ಕಂಗನಾ ರನೌಟ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.

ಭಾನುವಾರ ಸಂಜೆ ಲಖನೌದಲ್ಲಿಯೋಗಿ ಅವರನ್ನು ಭೇಟಿಯಾದ ಕಂಗನಾ, ಕೆಲ ಹೊತ್ತು ಮಾತುಕತೆ ನಡೆಸಿದರು. ಬಳಿಕ ಇನ್‌ಸ್ಟಾಗ್ರಾಂನಲ್ಲಿ ಈ ಬಗ್ಗೆ ಸಂತಸ ಹಂಚಿಕೊಂಡು ಪೋಸ್ಟ್ ಹಾಕಿದ್ದಾರೆ.

‘ಯೋಗಿ ಮಹಾರಾಜ್ ಅವರನ್ನು ಇಂದು ಭೇಟಿಯಾಗುವ ಸುವರ್ಣಾವಕಾಶ ಒದಗಿ ಬಂದಿತ್ತು. ಯೋಗಿ ಅವರಿಗೆ ಯೋಗಿ ಅವರೇ ಸಾಟಿ. ಇದೊಂದು ಅದ್ಭುತ ಭೇಟಿಯಾಗಿತ್ತು. ನಾನು ಅವರ ಭೇಟಿಯಿಂದ ವಿನಿತಳಾಗಿದ್ದೇನೆಹಾಗೂ ಪ್ರಭಾವಿತಳಾಗಿದ್ದೇನೆ. ಅವರೊಂದಿಗಿನ ಮಾತುಕತೆ ನನ್ನನ್ನು ಮೂಕವಿಸ್ಮಿತಳನ್ನಾಗಿ ಮಾಡಿದೆ’ ಎಂದು ಹೇಳಿಕೊಂಡಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಯೋಗಿ ಅವರು ಸತತ ಎರಡನೇ ಬಾರಿಗೆ ಸಿಎಂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ಅವರು ಯೋಗಿ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ್ದಾರೆ.

ಸದ್ಯ ಕಂಗನಾ ಅವರು ಲಾಕ್‌ಪ್ ಎಂಬ ರಿಯಾಲಿಟಿ ಶೋನಲ್ಲಿ ಸಕ್ರಿಯರಾಗಿದ್ದು, ಅವರ ಅಭಿನಯದ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಧಾಕಡ್’ ಇದೇ ಮೇ 20 ರಂದು ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT