ಬಾಲಿವುಡ್ನ ಗೀತೆ ರಚನೆಕಾರ ಜಾವೇದ್ ಅಖ್ತರ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಎದುರಿಸುತ್ತಿರುವ ಕಂಗನಾ ರನೌತ್ ವಿಚಾರಣೆಗೆ ಹಾಜರಾಗುವ ಪ್ರಕ್ರಿಯೆಯಿಂದ ಶಾಶ್ವತ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಹಿಂದಿ ಸಿನಿಮಾ ಕ್ಷೇತ್ರದ ದೊಡ್ಡ ನಟಿಯರ ಪೈಕಿ ತಾವು ಒಬ್ಬರಾಗಿದ್ದು, ದೇಶ ಮತ್ತು ವಿದೇಶದ ವಿವಿಧ ಭಾಗಗಳಿಗೆ ಸಂಚರಿಸುತ್ತಿರಬೇಕಾಗುತ್ತದೆ. ಹಾಗಾಗಿ ಕೋರ್ಟ್ಗೆ ಹಾಜರಾಗುವ ಪ್ರಕ್ರಿಯೆಯಿಂದ ವಿನಾಯಿತಿ ನೀಡಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದರು.