ಬೆಂಗಳೂರು: ಸದಾ ಸುದ್ದಿಯಲ್ಲಿರುವ ಬಾಲಿವುಡ್ ಚೆಲುವೆ ಕಂಗನಾ ರನೌತ್ ಅವರು ಇತ್ತೀಚೆಗಷ್ಟೇ ಕೊರೊನಾ ಸೋಂಕಿಗೆ ತುತ್ತಾಗಿ ದೀರ್ಘಾವಧಿಯ ವಿಶ್ರಾಂತಿಯಲ್ಲಿದ್ದರು.
ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿರುವ ಅವರು ಮನಾಲಿಯಿಂದ ಮುಂಬೈಗೆ ಬಂದಿಳಿದಿದ್ದು, ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ಧಾರೆ. ಇದೀಗ ಕಂಗನಾ ಭರ್ಜರಿಯಾಗಿ ಕುದುರೆ ಸವಾರಿ ಮಾಡುವ ಮೂಲಕ ಹೊಸ ಚೈತನ್ಯವನ್ನು ಕಂಡುಕೊಂಡಿದ್ದಾರೆ.
ಮುಂಬೈನಲ್ಲಿ ಮಳೆ ಸುರಿಯುವುದಕ್ಕೆ ಶನಿವಾರ ಕೊಂಚ ವಿರಾಮ ಸಿಕ್ಕಿತ್ತು. ಇದೇ ವೇಳೆ ಕುದುರೆ ಸವಾರಿ ನಡೆಸಿದ ಕಂಗನಾ, ಇನ್ಸ್ಟಾಗ್ರಾಮ್ ಹಾಗೂ ಕೂ ನಲ್ಲಿ ಇದಕ್ಕೆ ಸಂಬಂಧಿಸಿದ ವಿಡಿಯೋ ಹಂಚಿಕೊಂಡಿದ್ದಾರೆ.
‘ತಲೈವಿ ಚಿತ್ರಕ್ಕಾಗಿ ಸಾಕಷ್ಟು ತೂಕ ಹೆಚ್ಚಿಸಿಕೊಂಡೆ. ಬಹಳ ದಿನಗಳ ನಂತರ ಕುದುರೆ ಸವಾರಿ ಮಾಡಿದೆ. ಮೂಕಪ್ರಾಣಿಗಳೊಂದಿಗೆ ನಮ್ಮ ಮನದಾಳವನ್ನು ಹಂಚಿಕೊಳ್ಳುವುದಕ್ಕೆ ಇದೊಂದು ಅದ್ಭುತ ಉದಾಹರಣೆ. ಕುದುರೆ ಸವಾರಿಯಿಂದ ನನಗೆ ತುಂಬಾ ಖುಷಿಯಾಯಿತು‘ ಎಂದು ಬರೆದುಕೊಂಡಿದ್ದಾರೆ.