ನವದೆಹಲಿ:ಸ್ವಾತಂತ್ರ್ಯದ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪು ಎಂದು ಸಾಬೀತು ಮಾಡಿದರೆ 'ಪದ್ಮಶ್ರೀ'ಪ್ರಶಸ್ತಿ ವಾಪಸ್ ಮಾಡುವುದಾಗಿ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
‘ದೇಶಕ್ಕೆ ಸ್ವಾತಂತ್ರ್ಯ ದೊರೆತದ್ದು 2014ರಲ್ಲಿ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ‘ ಎಂದು ಕಂಗನಾ ಗುರುವಾರ ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರವು ನಟಿಗೆ ನೀಡಿರುವ 'ಪದ್ಮಶ್ರೀ' ವಾಪಸ್ ಪಡೆಯಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.
ತಮ್ಮ ವಿರುದ್ಧದ ಟೀಕೆಗಳಿಗೆ ಇನ್ಸ್ಟಾಗ್ರಾಂ ಮೂಲಕ ತಿರುಗೇಟು ನೀಡಿರುವ ಕಂಗನಾ,ತಪ್ಪು ಸಾಬೀತಾದರೆ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡುವುದಾಗಿ ತಿಳಿಸಿದ್ದಾರೆ.