ಬಾಲಿವುಡ್ ನಟಿ ಕಂಗನಾ ರನೌತ್ ಅಭಿನಯದ ಬಹುನಿರೀಕ್ಷಿತ ‘ಧಾಕಡ್’ ಚಿತ್ರ ಬಿಡುಗಡೆಗೆ ಸಿದ್ಧವಾಗಿರುವ ಬೆನ್ನಲ್ಲೇ ಕಂಗನಾ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ತಿರುಮಲಕ್ಕೆ ಆಗಮಿಸಿದ್ದ ನಟಿ ದೇವರ ದರ್ಶನ ಪಡೆದಿದ್ದಾರೆ. ಈಚಿತ್ರ ಕುರಿತಾಗಿ ಸಿನಿಮಾ ವೀಕ್ಷಕರು ಮತ್ತು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.
ಸಹೋದರಿ ರಂಗೋಲಿ ಚಂಡೇಲ್ ಸೇರಿದಂತೆ ಕುಟುಂಬದವರ ಜೊತೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ನಟಿಯ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನ ಮಂಡಳಿಯವರು ದೇವಾಲಯದ ಸುತ್ತಮುತ್ತ ಪೊಲೀಸ್ ಭದ್ರತೆ ಕಲ್ಪಿಸಿದ್ದರು. ಕಂಗಾನಾ ಅವರು ದೇವಾಲಯಕ್ಕೆ ಭೇಟಿ ನೀಡಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
ರಜನೀಶ್ ರಾಜಿ ಘಾಯ್ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾ ಇದೇ 20ರಂದು ಬಿಡುಗಡೆಯಾಗಲಿದೆ. ಚಿತ್ರತಂಡ ಈಗಾಗಲೇ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ.
ಇತ್ತೀಚೆಗೆ ಬಿಡುಗಡೆಯಾದ ‘ಧಾಕಡ್’ ಚಿತ್ರದ ಟ್ರೇಲರ್ ಮತ್ತು ಪೋಸ್ಟರ್ಗಳು ಪ್ರೇಕ್ಷಕರ ಗಮನ ಸೆಳೆದಿದ್ದು, ಚಿತ್ರದ ಬಗ್ಗೆ ಬಾಲಿವುಡ್ನಲ್ಲಿ ಕುತೂಹಲ ಹೆಚ್ಚಾಗಿದೆ. ಈ ಹಿಂದೆ ಸಲ್ಮಾನ್ ಖಾನ್ ಕೂಡ ಟ್ರೇಲರ್ ವೀಕ್ಷಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.