ಈ ಕುರಿತು ಶನಿವಾರ ಸಾಮಾಜಿಕ ತಾಣ ಫೇಸ್ಬುಕ್ನಲ್ಲಿ ಪೋಸ್ಟ್ ಪ್ರಕಟಿಸಿರುವ ಚೇತನ್, 'ವಿಷ್ಣುವರ್ಧನ್ ಅವರ ವಿರುದ್ಧ ವಿಜಯ್ ರಂಗರಾಜ್ ನೀಡಿದ ಹೇಳಿಕೆಯನ್ನು ನಾನು ನೋಡಿದೆ. ರಂಗರಾಜ್ ಅವರ ಮಾತುಗಳು ಅಸಹ್ಯ ಮತ್ತು ಸೂಕ್ತವಲ್ಲದ್ದು. ಹೌದು, ಜನರ ಒಟ್ಟಿಗೆ ಕೆಲಸ ಮಾಡುವಾಗ ಪರಸ್ಪರ ಘರ್ಷಣೆಗಳು ಸಂಭವಿಸಬಹುದು. ಮತ್ತು ವೈಯಕ್ತಿಕ ಸ್ಮರಣೆಗೆ ಅನುಗುಣವಾಗಿ ಸತ್ಯವು ಭಿನ್ನವಾಗಿರುತ್ತದೆ. ಆದರೆ, ನಾಲಿಗೆಯ ಸಭ್ಯತೆ ಅತ್ಯಗತ್ಯ,' ಎಂದು ಅವರು ಪೋಸ್ಟ್ ಪ್ರಕಟಿಸಿದ್ದಾರೆ.