ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಟೆಲ್ ಸಿಬ್ಬಂದಿ ಮೇಲೆ ದರ್ಶನ್‌ ಹಲ್ಲೆ ಪ್ರಕರಣ: ತನಿಖೆ ಆರಂಭ

ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ವಶಕ್ಕೆ
Last Updated 16 ಜುಲೈ 2021, 19:36 IST
ಅಕ್ಷರ ಗಾತ್ರ

ಮೈಸೂರು: ನಟ ದರ್ಶನ್ ಅವರು ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜ ಉಪವಿಭಾಗದ ಎಸಿಪಿ ಶಶಿಧರ್ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ‘ಸಂದೇಶ್ ದ ಪ್ರಿನ್ಸ್‘ ಹೋಟೆಲ್‌ಗೆ ಭೇಟಿ ನೀಡಿ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ವಶಕ್ಕೆ ಪಡೆದರು.

ಹಲ್ಲೆಗೆ ಒಳಗಾದರು ಎನ್ನಲಾದ ಹೋಟೆಲ್ ಸಿಬ್ಬಂದಿ ಗಂಗಾಧರ್ ಹಾಗೂ ಮಾಲೀಕ ಸಂದೇಶ್‌ ನಾಗರಾಜ್ ಅವರ ಪುತ್ರ ಸಂದೇಶ್‌ ಅವರನ್ನು ವಿಚಾರಣೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗಂಗಾಧರ್, ‘ನಮ್ಮದು ನಾಯರ್‌ ಸಮುದಾಯ. ಸರ್ವೀಸ್ ತಡವಾಗಿದ್ದರಿಂದ ನಟ ದರ್ಶನ್ ಏರುದನಿಯಲ್ಲಿ ಮಾತನಾಡಿದರು. ಹಲ್ಲೆ ನಡೆಸಿಲ್ಲ’ ಎಂದು ಹೇಳಿದರು.

ಸಂದೇಶ್‌ ಪ್ರತಿಕ್ರಿಯಿಸಿ, ‘ದರ್ಶನ್ ಮತ್ತು ಇಂದ್ರಜಿತ್ ಈ ವಿಚಾರವನ್ನು ಇಲ್ಲಿಗೆ ಬಿಟ್ಟರೆ ನನಗೂ ಒಳ್ಳೆಯದು, ಅವರಿಗೂ ಒಳ್ಳೆಯದು. ವಿವಾದ
ದಿಂದ ಕಾರ್ಮಿಕರು ಕೆಲಸಕ್ಕೆ ಬರುವುದಿಲ್ಲ ಎನ್ನುತ್ತಿದ್ದಾರೆ. ಲಸಿಕೆ ತೆಗೆದುಕೊಂಡ ಕಾರ್ಮಿಕರು ಸಿಗುತ್ತಿಲ್ಲ. ಕಾಲು, ಕೈ ಹಿಡಿದು ಕೆಲಸಕ್ಕೆ ಕರೆದುಕೊಂಡು ಬಂದಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT