<p><strong>ಮಂಡ್ಯ</strong>: ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಕನ್ನಡ ಸಿನಿಮಾ ಖ್ಯಾತಿಯ ನೊದೆಕೊಪ್ಪಲು ಗ್ರಾಮದ ಗಡ್ಡಪ್ಪ ಅಲಿಯಾಸ್ ಚನ್ನೇಗೌಡ (89) ಬುಧವಾರ ನಿಧನರಾಗಿದ್ದಾರೆ. </p><p>ಆಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ ಅವರು ತಿಂಗಳ ಹಿಂದೆ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಆಪರೇಷನ್ ಕೂಡ ಆಗಿತ್ತು. ಬುಧವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. </p><p>ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿದಂತೆ 10ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. </p><p>ಸ್ವಗ್ರಾಮ ನೊದೆಕೊಪ್ಪಲು ಗ್ರಾಮದ ಅವರ ಜಮೀನಿನಲ್ಲಿ ಬುಧವಾರ ಸಂಜೆ 5ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ. </p><p><strong>ಸಿನಿಮಾ ಅಂದ್ರೆ ಹುಚ್ಚು</strong></p><p>‘ನಮ್ಮ ತಂದೆಗೆ ಸಿನಿಮಾ ಅಂದ್ರೆ ಒಂದು ರೀತಿಯ ಹುಚ್ಚು. ಚಿತ್ರಮಂದಿರಕ್ಕೆ ಹೋಗಿ ವೀಕ್ಷಿಸುತ್ತಿದ್ದರು. ಸಿನಿಮಾ ಅವಕಾಶಗಳು ಸಿಕ್ಕರೂ ಅನಾರೋಗ್ಯದ ಕಾರಣ ಇತ್ತೀಚೆಗೆ ನಟಿಸಲು ಸಾಧ್ಯವಾಗಲಿಲ್ಲ. ಹೋಟೆಲ್ ನಡೆಸುತ್ತಿದ್ದ ದಿನದಿಂದಲೂ ನಮ್ಮ ತಂದೆಗೆ ಗಡ್ಡಪ್ಪ ಅನ್ನೋ ಹೆಸರು ಇತ್ತು. ಆ ಹೆಸರೇ ‘ತಿಥಿ’ ಸಿನಿಮಾದಲ್ಲೂ ಬಳಕೆಯಾಯಿತು. ಕೆಲವು ಅಭಿಮಾನಿಗಳು ಗಡ್ಡಪ್ಪನವರನ್ನು ಹುಡುಕಿಕೊಂಡು ಬರುತ್ತಿದ್ದರು. ನಮ್ಮ ತಂದೆಯವರಿಂದಲೇ ಮನೆ ನಡೆಯುತ್ತಿತ್ತು’ ಎಂದು ಪುತ್ರಿ ಶೋಭಾ ಕಣ್ಣೀರು ಹಾಕಿದರು.</p>.ಕನ್ನಡ ಸಿನಿಮಾ ‘ತಿಥಿ’ಗೆ ಪ್ರಶಸ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಕನ್ನಡ ಸಿನಿಮಾ ಖ್ಯಾತಿಯ ನೊದೆಕೊಪ್ಪಲು ಗ್ರಾಮದ ಗಡ್ಡಪ್ಪ ಅಲಿಯಾಸ್ ಚನ್ನೇಗೌಡ (89) ಬುಧವಾರ ನಿಧನರಾಗಿದ್ದಾರೆ. </p><p>ಆಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ ಅವರು ತಿಂಗಳ ಹಿಂದೆ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಆಪರೇಷನ್ ಕೂಡ ಆಗಿತ್ತು. ಬುಧವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. </p><p>ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿದಂತೆ 10ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. </p><p>ಸ್ವಗ್ರಾಮ ನೊದೆಕೊಪ್ಪಲು ಗ್ರಾಮದ ಅವರ ಜಮೀನಿನಲ್ಲಿ ಬುಧವಾರ ಸಂಜೆ 5ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ. </p><p><strong>ಸಿನಿಮಾ ಅಂದ್ರೆ ಹುಚ್ಚು</strong></p><p>‘ನಮ್ಮ ತಂದೆಗೆ ಸಿನಿಮಾ ಅಂದ್ರೆ ಒಂದು ರೀತಿಯ ಹುಚ್ಚು. ಚಿತ್ರಮಂದಿರಕ್ಕೆ ಹೋಗಿ ವೀಕ್ಷಿಸುತ್ತಿದ್ದರು. ಸಿನಿಮಾ ಅವಕಾಶಗಳು ಸಿಕ್ಕರೂ ಅನಾರೋಗ್ಯದ ಕಾರಣ ಇತ್ತೀಚೆಗೆ ನಟಿಸಲು ಸಾಧ್ಯವಾಗಲಿಲ್ಲ. ಹೋಟೆಲ್ ನಡೆಸುತ್ತಿದ್ದ ದಿನದಿಂದಲೂ ನಮ್ಮ ತಂದೆಗೆ ಗಡ್ಡಪ್ಪ ಅನ್ನೋ ಹೆಸರು ಇತ್ತು. ಆ ಹೆಸರೇ ‘ತಿಥಿ’ ಸಿನಿಮಾದಲ್ಲೂ ಬಳಕೆಯಾಯಿತು. ಕೆಲವು ಅಭಿಮಾನಿಗಳು ಗಡ್ಡಪ್ಪನವರನ್ನು ಹುಡುಕಿಕೊಂಡು ಬರುತ್ತಿದ್ದರು. ನಮ್ಮ ತಂದೆಯವರಿಂದಲೇ ಮನೆ ನಡೆಯುತ್ತಿತ್ತು’ ಎಂದು ಪುತ್ರಿ ಶೋಭಾ ಕಣ್ಣೀರು ಹಾಕಿದರು.</p>.ಕನ್ನಡ ಸಿನಿಮಾ ‘ತಿಥಿ’ಗೆ ಪ್ರಶಸ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>