ಶ್ರೀಧರ ಕೃಪ ಕಂಬೈನ್ಸ್ ಬ್ಯಾನರ್ನಡಿ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದ್ದು, ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಆ್ಯಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾವಿದು. ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿ ಇರಲಿದ್ದಾರೆ. ಫೆ.20ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಶೀರ್ಷಿಕೆ ಹಾಗೂ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಹಂಚಿಕೊಳ್ಳು ವುದಾಗಿ ಚಿತ್ರತಂಡ ತಿಳಿಸಿದೆ.