ಈ ಕುರಿತ ಮಾಹಿತಿಯನ್ನು ಪಾರದರ್ಶಕವಾಗಿ ನಟ ಉಪೇಂದ್ರ ಅವರು ತಮ್ಮ ಟ್ವಿಟರ್ ಖಾತೆಯ ಮುಖಾಂತರ ನೀಡುತ್ತಿದ್ದಾರೆ. ‘ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ, ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ’ ಎಂದು ಉಪೇಂದ್ರ ಟ್ವೀಟ್ ಮೂಲಕ ಸೋಮವಾರ ತಿಳಿಸಿದ್ದರು.