<p>ಒಂದು ಕಾಲಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಎಸ್.ಮಹೇಂದರ್ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಹೊಸ ಚಿತ್ರವೊಂದಕ್ಕಾಗಿ ಮತ್ತೆ ಒಂದಾಗಿದ್ದಾರೆ. ಶೀಘ್ರದಲ್ಲಿ ಈ ಚಿತ್ರ ಸೆಟ್ಟೇರಲಿದೆ.</p>.<p>‘ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯ, ಹೊಸ ತಲೆಮಾರಿನ ಸಿನಿಮಾಗಳು ಬರುತ್ತಿವೆ. ಜಾಗತಿಕ ಮಟ್ಟದಲ್ಲಿ ಕನ್ನಡದ ಕಂಪು ಸೂಸುತ್ತಿವೆ. ಈ ಬೆಳವಣಿಗೆಗೆ ಅಡಿಪಾಯ ಹಾಕಿದವರು, ಆ ಕಾಲಘಟ್ಟದಲ್ಲಿ ಹಲವು ದಾಖಲೆಗಳನ್ನ ಬರೆದವರು ಮತ್ತೆ ಬರುತ್ತಿದ್ದಾರೆ’ ಎಂದು ಚಿತ್ರತಂಡ ಹೇಳಿದೆ.</p>.<p>ಈ ಜೋಡಿ ಸುಮಾರು 20 ಸಿನಿಮಾಗಳಿಗೆ ಜೊತೆಯಾಗಿ ಕೆಲಸ ಮಾಡಿತ್ತು. ಶ್ರೀಗುರುರಾಯರು ಸಿನಿಮಾ ಬ್ಯಾನರ್ನಡಿಯಲ್ಲಿ ಕೆ.ಸಿ ವಿಜಯ ಕುಮಾರ್ ಹೊಸ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಜ.16ರಂದು ಚಿತ್ರ ಸೆಟ್ಟೇರಲಿದೆ. ಉಳಿದ ಮಾಹಿತಿಗಳನ್ನು ಶೀಘ್ರದಲ್ಲಿ ನೀಡಲಾಗುವುದು ಎಂದು ಚಿತ್ರತಂಡ ಹೇಳಿದೆ. </p>
<p>ಒಂದು ಕಾಲಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಎಸ್.ಮಹೇಂದರ್ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಹೊಸ ಚಿತ್ರವೊಂದಕ್ಕಾಗಿ ಮತ್ತೆ ಒಂದಾಗಿದ್ದಾರೆ. ಶೀಘ್ರದಲ್ಲಿ ಈ ಚಿತ್ರ ಸೆಟ್ಟೇರಲಿದೆ.</p>.<p>‘ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯ, ಹೊಸ ತಲೆಮಾರಿನ ಸಿನಿಮಾಗಳು ಬರುತ್ತಿವೆ. ಜಾಗತಿಕ ಮಟ್ಟದಲ್ಲಿ ಕನ್ನಡದ ಕಂಪು ಸೂಸುತ್ತಿವೆ. ಈ ಬೆಳವಣಿಗೆಗೆ ಅಡಿಪಾಯ ಹಾಕಿದವರು, ಆ ಕಾಲಘಟ್ಟದಲ್ಲಿ ಹಲವು ದಾಖಲೆಗಳನ್ನ ಬರೆದವರು ಮತ್ತೆ ಬರುತ್ತಿದ್ದಾರೆ’ ಎಂದು ಚಿತ್ರತಂಡ ಹೇಳಿದೆ.</p>.<p>ಈ ಜೋಡಿ ಸುಮಾರು 20 ಸಿನಿಮಾಗಳಿಗೆ ಜೊತೆಯಾಗಿ ಕೆಲಸ ಮಾಡಿತ್ತು. ಶ್ರೀಗುರುರಾಯರು ಸಿನಿಮಾ ಬ್ಯಾನರ್ನಡಿಯಲ್ಲಿ ಕೆ.ಸಿ ವಿಜಯ ಕುಮಾರ್ ಹೊಸ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಜ.16ರಂದು ಚಿತ್ರ ಸೆಟ್ಟೇರಲಿದೆ. ಉಳಿದ ಮಾಹಿತಿಗಳನ್ನು ಶೀಘ್ರದಲ್ಲಿ ನೀಡಲಾಗುವುದು ಎಂದು ಚಿತ್ರತಂಡ ಹೇಳಿದೆ. </p>