‘ಮೊಗ್ಗಿನ ಮನಸು’ ಚಿತ್ರದ ನಂತರ ನಿರ್ದೇಶಕ ಶಶಾಂಕ್ ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ. ‘ಶಶಾಂಕ್ ಸಿನೆಮಾಸ್’ ಬ್ಯಾನರ್ ಅಡಿ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಪ್ರವೀಣ್ ಈ ಚಿತ್ರದ ನಾಯಕ. ಹೊಸಪೇಟೆಯವರಾದ ಪ್ರವೀಣ್ ವೈದ್ಯರು. ನಟನೆಯ ತರಬೇತಿ ಪಡೆದು ಕ್ಯಾಮೆರಾ ಎದುರಿಸುತ್ತಿದ್ದಾರೆ. ನಾಯಕಿಯ ಹುಡುಕಾಟ ನಡೆದಿದೆ.