ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ದಾಖಲೆ ನೀಡಿ ವಂಚನೆ: ಸಿಸಿಬಿಗೆ ನಿರ್ದೇಶಕ ಎಸ್‌. ನಾರಾಯಣ್‌ ದೂರು

Last Updated 18 ಮಾರ್ಚ್ 2020, 13:09 IST
ಅಕ್ಷರ ಗಾತ್ರ

ಬೆಂಗಳೂರು: ತಮಗೆ 1.60 ಕೋಟಿ ರೂಪಾಯಿ ಮೋಸ ಮಾಡಿರುವ ಬಗ್ಗೆ ನಟ, ನಿರ್ದೇಶಕ, ನಿರ್ಮಾಪಕರೂ ಆಗಿರುವ ಎಸ್. ನಾರಾಯಣ್ ಅವರು ಸಿಸಿಬಿ ಡಿಸಿಪಿ ರವಿಕುಮಾರ್ ಅವರಿಗೆ ದೂರು ನೀಡಿದ್ದಾರೆ.

ಕಳೆದ ವರ್ಷ ಎಸ್. ನಾರಾಯಣ್ ಮತ್ತು ಮೂವರು ಸೇರಿ ಸಿನಿಮಾವೊಂದನ್ನು ನಿರ್ಮಾಣ ಮಾಡಲು ಮುಂದಾಗಿದ್ದರು. ಆದರೆ, ಸಿನಿಮಾ ಮುಹೂರ್ತ ಮಾತ್ರವೇ ಆಗಿತ್ತು. ಶೂಟಿಂಗ್ ನಿಂತು ಹೋಗಿತ್ತು.

ಪಾಲುದಾರರು ಸಿನಿಮಾದ ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್‌. ನಾರಾಯಣ್‌ ಅವರಿಗೆ ಸೂಚಿಸಿದ್ದರು. ಅಂತೆಯೇ ನಾರಾಯಣ್ ಅವರು 1.60 ಕೋಟಿ ಹಣ ಕೊಟ್ಟು ಎಚ್‌.ಬಿ.ಆರ್‌. ಬಡಾವಣೆಯಲ್ಲಿ ನಿವೇಶನವನ್ನು ಖರೀದಿಸಿದ್ದರು.

ಆದರೆ, ಖರೀದಿಸಿದ ನಿವೇಶನದ ದಾಖಲೆಗಳು ನಕಲಿ ಆಗಿವೆ. ನಕಲಿ ದಾಖಲೆ ಕೊಟ್ಟು ನನ್ನ ಬಳಿ ಹಣ ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ನಾರಾಯಣ್ ಉಲ್ಲೇಖಿಸಿದ್ದಾರೆ.

ನಿವೇಶನ ಕೊಳ್ಳಲು ಬ್ಯಾಂಕ್‌ ನಲ್ಲಿ ಸಾಲ ಮಾಡಿದ್ದೆ. ಸಾಲದ ಮೊತ್ತ ಈಗ 2 ಕೋಟಿ ರೂಪಾಯಿ ದಾಟಿದೆ. ಸಾಲ ಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ನ್ಯಾಯ ಒದಗಿಸಿಕೊಡಿ ಎಂದೂ ಪೊಲೀಸರ ಬಳಿ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT