<p><strong>ಬೆಂಗಳೂರು:</strong> ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲಿ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸತ್ಯಜಿತ್(72) ಭಾನುವಾರ ಮುಂಜಾನೆ 2 ಗಂಟೆಗೆ ನಿಧನರಾದರು.</p>.<p>ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ವಾರದ ಹಿಂದಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋಸಹಜ ಆರೋಗ್ಯದ ಸಮಸ್ಯೆಗಳ ಜೊತೆ 2016ರಲ್ಲಿ ಗ್ಯಾಂಗ್ರಿನ್ಗೆ ತುತ್ತಾಗಿ ಒಂದು ಕಾಲನ್ನು ಸತ್ಯಜಿತ್ ಕಳೆದುಕೊಂಡರು. ಬಳಿಕವೂ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದರು.</p>.<p>ಅವರಿಗೆ ಪುತ್ರಿ ಹಾಗೂ ಪುತ್ರ ಇದ್ದಾರೆ. ಪುತ್ರಿ ವಿಮಾನಯಾನ ಸಂಸ್ಥೆಯೊಂದರಲ್ಲಿ ಉದ್ಯೋಗಿ. ಪುತ್ರ ಚಿತ್ರರಂಗದಲ್ಲಿ ತೊಡಗಿದ್ದಾರೆ.</p>.<p>ಬೆಳ್ಳಿತೆರೆಯ ಮೇಲೆ ಖಳ, ಪೊಲೀಸ್, ಪೋಷಕ ನಟನಾಗಿ ಸತ್ಯಜಿತ್ ಅವರನ್ನು ಕಾಣದವರು ಅಪರೂಪ.</p>.<p>1986ರಲ್ಲಿ ಬಿಡುಗಡೆಯಾದ ‘ಅಂಕುಶ್’ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟರು. ಮುಂದೆ ಮೈಸೂರು ಜಾಣ (1992) ಅವರಿಗೆ ಚಂದನವನದಲ್ಲಿ ನೆಲೆಯೂರಲು ಬ್ರೇಕ್ ಕೊಟ್ಟ ಸಿನಿಮಾ. ‘ಪುಟ್ನಂಜ’, ‘ಶಿವಮೆಚ್ಚಿದ ಕಣ್ಣಪ್ಪ’, ‘ಚೈತ್ರದ ಪ್ರೇಮಾಂಜಲಿ’, ‘ಆಪ್ತಮಿತ್ರ’ ಚಿತ್ರದ ಪಾತ್ರಗಳು ಜನಮಾನಸದಲ್ಲಿ ಇನ್ನೂ ನೆನಪಿವೆ. 600ಕ್ಕೂ ಅಧಿಕ ಸಿನಿಮಾಗಳಲ್ಲಿ ಸತ್ಯಜಿತ್ ನಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲಿ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸತ್ಯಜಿತ್(72) ಭಾನುವಾರ ಮುಂಜಾನೆ 2 ಗಂಟೆಗೆ ನಿಧನರಾದರು.</p>.<p>ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ವಾರದ ಹಿಂದಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋಸಹಜ ಆರೋಗ್ಯದ ಸಮಸ್ಯೆಗಳ ಜೊತೆ 2016ರಲ್ಲಿ ಗ್ಯಾಂಗ್ರಿನ್ಗೆ ತುತ್ತಾಗಿ ಒಂದು ಕಾಲನ್ನು ಸತ್ಯಜಿತ್ ಕಳೆದುಕೊಂಡರು. ಬಳಿಕವೂ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದರು.</p>.<p>ಅವರಿಗೆ ಪುತ್ರಿ ಹಾಗೂ ಪುತ್ರ ಇದ್ದಾರೆ. ಪುತ್ರಿ ವಿಮಾನಯಾನ ಸಂಸ್ಥೆಯೊಂದರಲ್ಲಿ ಉದ್ಯೋಗಿ. ಪುತ್ರ ಚಿತ್ರರಂಗದಲ್ಲಿ ತೊಡಗಿದ್ದಾರೆ.</p>.<p>ಬೆಳ್ಳಿತೆರೆಯ ಮೇಲೆ ಖಳ, ಪೊಲೀಸ್, ಪೋಷಕ ನಟನಾಗಿ ಸತ್ಯಜಿತ್ ಅವರನ್ನು ಕಾಣದವರು ಅಪರೂಪ.</p>.<p>1986ರಲ್ಲಿ ಬಿಡುಗಡೆಯಾದ ‘ಅಂಕುಶ್’ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟರು. ಮುಂದೆ ಮೈಸೂರು ಜಾಣ (1992) ಅವರಿಗೆ ಚಂದನವನದಲ್ಲಿ ನೆಲೆಯೂರಲು ಬ್ರೇಕ್ ಕೊಟ್ಟ ಸಿನಿಮಾ. ‘ಪುಟ್ನಂಜ’, ‘ಶಿವಮೆಚ್ಚಿದ ಕಣ್ಣಪ್ಪ’, ‘ಚೈತ್ರದ ಪ್ರೇಮಾಂಜಲಿ’, ‘ಆಪ್ತಮಿತ್ರ’ ಚಿತ್ರದ ಪಾತ್ರಗಳು ಜನಮಾನಸದಲ್ಲಿ ಇನ್ನೂ ನೆನಪಿವೆ. 600ಕ್ಕೂ ಅಧಿಕ ಸಿನಿಮಾಗಳಲ್ಲಿ ಸತ್ಯಜಿತ್ ನಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>