ಇತ್ತೀಚೆಗಷ್ಟೇ ಸೀಮಂತ ಕಾರ್ಯಕ್ರಮದ ಫೋಟೊಗಳನ್ನು ಅಮೂಲ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಚಂದನವನದ ಹಲವು ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಚೆಲುವಿನ ಚಿತ್ತಾರ’ ಸಿನಿಮಾ ಮುಖಾಂತರ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದ ಅಮೂಲ್ಯ, ನಂತರದಲ್ಲಿ ಹಲವು ಖ್ಯಾತ ನಟರೊಂದಿಗೆ ತೆರೆಹಂಚಿಕೊಂಡಿದ್ದರು. ಮದುವೆಯ ನಂತರ ಸಿನಿಮಾದಿಂದ ಕೊಂಚ ದೂರ ಉಳಿದಿದ್ದ ಅಮೂಲ್ಯ, ಗಣೇಶ್ ಅಭಿನಯಿಸಿದ್ದ ‘ಮುಗುಳುನಗೆ’ ಸಿನಿಮಾದಲ್ಲಿ ಪಾತ್ರವೊಂದನ್ನು ಮಾಡಿದ್ದರು.