‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿನಿಮಾಗಳನ್ನು ಆಯ್ಕೆ ಮಾಡುವಾಗ ಸಂಸ ಅವರ ಬಗ್ಗೆ ಗೊತ್ತಿಲ್ಲದವರೇ ನಮ್ಮ ಸಿನಿಮಾ ವೀಕ್ಷಿಸಲು ಬಂದಿದ್ದರು. 2018ನೇ ಸಾಲಿನ ಪ್ರಶಸ್ತಿಗಳಿಗೆ ಆಯ್ಕೆಯಾದವರ ಬಗ್ಗೆ ನಮಗೆ ತಕರಾರು ಇಲ್ಲ. ಅಖಿಲ ಭಾರತ ಮಟ್ಟದಲ್ಲಿ ದಾಖಲೆ ಬರೆದ ಈ ಚಿತ್ರಕ್ಕೆ ಅವರೇ ಕರೆದು ಮನ್ನಣೆ ನೀಡಬೇಕಿತ್ತು. ಆದರೆ, ಚಿತ್ರವನ್ನು ಸ್ಮರಿಸುವ ಸೌಜನ್ಯ ಕೂಡ ಅವರಲ್ಲಿ ಇಲ್ಲ’ ಎಂದು ಪ್ರಭು ಆಕ್ರೋಶ ವ್ಯಕ್ತಪಡಿಸಿದರು.