‘ಕೆಸಿಸಿ ಮೂರನೇ ಆವೃತ್ತಿಯಲ್ಲಿ ಆರು ತಂಡಗಳಿದ್ದು, ಜ.26ರಂದು ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕೆಸಿಸಿಯಲ್ಲಿ ಪಾಲ್ಗೊಳ್ಳಲು ಇಲ್ಲಿಯವರೆಗೂ 9 ಅಂತರರಾಷ್ಟ್ರೀಯ ಕ್ರಿಕೆಟ್ ಆಟಗಾರರು ಒಪ್ಪಿಗೆ ಸೂಚಿಸಿದ್ದು, ಈ ಪೈಕಿ ಆರು ಆಟಗಾರರನ್ನು ಆಯ್ಕೆ ಮಾಡಲಾಗುವುದು. ಆರು ತಂಡಗಳ ನಾಯಕರು ಯಾರು ಎನ್ನುವುದೂ ಜ.26ಕ್ಕೆ ತಿಳಿಯಲಿದೆ. ಈ ಬಾರಿಯ ಕೆಸಿಸಿಯಲ್ಲಿ ಶಿವರಾಜ್ಕುಮಾರ್ ಅವರು ಆಟ ಆಡುವುದು ಅನುಮಾನ. ಕ್ರಿಕೆಟ್ ಮೇಲೆ ಆಸಕ್ತಿ ಇರುವ ಬೇರೆ ಭಾಷೆಯ ನಟರು, ರಾಜಕಾರಣಿಗಳು, ಕಾರ್ಪೊರೇಟ್ ಕಂಪನಿಯವರೂ ಈ ಬಾರಿ ಕೆಸಿಸಿಯ ತಂಡಗಳಲ್ಲಿ ಇರಲಿದ್ದಾರೆ. ಕನ್ನಡ ಚಿತ್ರರಂಗದ ಪ್ರತಿಯೊಬ್ಬರನ್ನೂ ನಾವು ಆಹ್ವಾನಿಸಿದ್ದೇವೆ. ಬರದೇ ಇರುವವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ’ ಎನ್ನುತ್ತಾರೆ ನಟ ಸುದೀಪ್.