‘ಸುಮಾರು ಎಪ್ಪತ್ತು ದಿನಗಳ ಚಿತ್ರೀಕರಣ ನಡೆಸಿದ್ದೇವೆ. ಚಿತ್ರದ ಕೊನೆಯ ಶೆಡ್ಯೂಲ್ನ ವಿಶೇಷವೆಂದರೆ, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅವರು ನಾಯಕನ ತಂದೆ ಪಾತ್ರದಲ್ಲಿ ಇಲ್ಲಿ ನಟಿಸಿದ್ದಾರೆ. ಯಶಸ್ ಸೂರ್ಯ, ಸೋನಾಲ್ ಮೊಂತೆರೊ, ಬಿ.ಸಿ.ಪಾಟೀಲ್, ರವಿಶಂಕರ್, ಸುಜಯ್ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ‘ಗರಡಿ’ ಹಳೆ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ’ ಎನ್ನುತ್ತಾರೆ ಯೋಗರಾಜ್ ಭಟ್.