<p><strong>ಪಾಂಡವಪುರ</strong>: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯ ಮತ್ತು ಸಂಕಲನಕಾರ ನರಹಳ್ಳಿ ಜ್ಞಾನೇಶ್ (48) ಅವರು ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.</p><p>ಜ್ಞಾನೇಶ್ ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಹೋಬಳಿಯ ನರಹಳ್ಳಿ ಗ್ರಾಮದ ಬಿ. ಬೋರೇಗೌಡ ಮತ್ತು ಮರಿಲಿಂಗಮ್ಮ ಪುತ್ರ. </p><p>ನಾಗಮಂಡಲ, ಹಿಮಪಾತ, ಮುಂಗಾರಿನ ಮುಂಚು, ಅಮೃತ ವರ್ಷಿಣಿ, ಲಾಲಿ ಮುಂತಾದ ಚಿತ್ರಗಳಿಗೆ ಸಹಾಯಕ ಸಂಕಲನಕಾರನಾಗಿ ಕೆಲಸ ಮಾಡಿದ್ದರು. ನಂತರ ‘ಅರ್ಥ’ ಸಿನಿಮಾದಲ್ಲಿ ಸ್ವತಂತ್ರ ಸಂಕಲನಕಾರರಾದರು. </p><p>‘ಪವಾಡ ಪುರುಷ ಶ್ರೀ ಸಿದ್ದಪ್ಪಾಜಿ’ ಮತ್ತು ‘ಪಂಚಾಮೃತ’ ಚಿತ್ರಗಳಿಗೆ ಸಹ ನಿರ್ಮಾಪಕರಾಗಿದ್ದಾರೆ. ‘ಗಾಂಧಿ ಮಾರ್ಗ’ ಹಾಗೂ ಬಿಡುಗಡೆಯಾಬೇಕಿರುವ ‘ಬನದ ಹೂ’ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. </p><p>ಜ್ಞಾನೇಶ್ ನರಹಳ್ಳಿ ಅವರ ಅಂತ್ಯಕ್ರಿಯೆಯು ಶುಕ್ರವಾರ ಮಧ್ಯಾಹ್ನ ನರಹಳ್ಳಿ ಗ್ರಾಮದಲ್ಲಿ ನೆರವೇರಿತು.</p>.ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳ 9ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಡ: CM.ಶಿವಮೊಗ್ಗ| ಕಾಯಕ, ಮನುಷ್ಯತ್ವ ಬೋಧಿಸುವುದೇ ನಿಜ ಧರ್ಮ: ಸಂಸದ ಬಿ.ವೈ.ರಾಘವೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯ ಮತ್ತು ಸಂಕಲನಕಾರ ನರಹಳ್ಳಿ ಜ್ಞಾನೇಶ್ (48) ಅವರು ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.</p><p>ಜ್ಞಾನೇಶ್ ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಹೋಬಳಿಯ ನರಹಳ್ಳಿ ಗ್ರಾಮದ ಬಿ. ಬೋರೇಗೌಡ ಮತ್ತು ಮರಿಲಿಂಗಮ್ಮ ಪುತ್ರ. </p><p>ನಾಗಮಂಡಲ, ಹಿಮಪಾತ, ಮುಂಗಾರಿನ ಮುಂಚು, ಅಮೃತ ವರ್ಷಿಣಿ, ಲಾಲಿ ಮುಂತಾದ ಚಿತ್ರಗಳಿಗೆ ಸಹಾಯಕ ಸಂಕಲನಕಾರನಾಗಿ ಕೆಲಸ ಮಾಡಿದ್ದರು. ನಂತರ ‘ಅರ್ಥ’ ಸಿನಿಮಾದಲ್ಲಿ ಸ್ವತಂತ್ರ ಸಂಕಲನಕಾರರಾದರು. </p><p>‘ಪವಾಡ ಪುರುಷ ಶ್ರೀ ಸಿದ್ದಪ್ಪಾಜಿ’ ಮತ್ತು ‘ಪಂಚಾಮೃತ’ ಚಿತ್ರಗಳಿಗೆ ಸಹ ನಿರ್ಮಾಪಕರಾಗಿದ್ದಾರೆ. ‘ಗಾಂಧಿ ಮಾರ್ಗ’ ಹಾಗೂ ಬಿಡುಗಡೆಯಾಬೇಕಿರುವ ‘ಬನದ ಹೂ’ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. </p><p>ಜ್ಞಾನೇಶ್ ನರಹಳ್ಳಿ ಅವರ ಅಂತ್ಯಕ್ರಿಯೆಯು ಶುಕ್ರವಾರ ಮಧ್ಯಾಹ್ನ ನರಹಳ್ಳಿ ಗ್ರಾಮದಲ್ಲಿ ನೆರವೇರಿತು.</p>.ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳ 9ನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಡ: CM.ಶಿವಮೊಗ್ಗ| ಕಾಯಕ, ಮನುಷ್ಯತ್ವ ಬೋಧಿಸುವುದೇ ನಿಜ ಧರ್ಮ: ಸಂಸದ ಬಿ.ವೈ.ರಾಘವೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>