<p>ಕಮಲಿ, ಅಗ್ನಿಸಾಕ್ಷಿ, ನಾಗಿಣಿಯಂತಹ ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸಿದ್ದ ಹಯವದನ್ ಸಿನಿಮಾದತ್ತ ಹೊರಳಿದ್ದಾರೆ. ಚಿತ್ರದ ಶೀರ್ಷಿಕೆಯೊಂದಿಗೆ ಮೊದಲ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಶೀರ್ಷಿಕೆ. ‘ಕಂಬ್ಳಿಹುಳ’ ಚಿತ್ರದಲ್ಲಿ ನಾಯಕನಾಗಿದ್ದ ಅಂಜನ್ ನಾಗೇಂದ್ರ ಈ ಚಿತ್ರದ ನಾಯಕ. ಪವನ್ ಶಿಮಿಕೇರಿ ಮತ್ತು ಸಿಂಧು ಹಯವದನ್ ಚಿತ್ರದ ನಿರ್ಮಾಪಕರು. ಶಿವಪ್ರಸಾದ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.</p>.<p>‘ತಂದೆ ಮಗನ ಜನರೇಷನ್ ಗ್ಯಾಪ್ನ ಗುದ್ದಾಟ. ನವೀರಾದ ಪ್ರೇಮಕಥೆ’ ಎಂದು ಹಯವದನ್ ತಮ್ಮ ಚಿತ್ರದ ಕುರಿತು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಏನನ್ನೋ ಹುಡುಕಿಕೊಂಡು ಬುದ್ಧ ಗಯಾದತ್ತ ಹೋಗುವ ಹುಡುಗನ ಕಥೆ ಎಂಬುದನ್ನು ನವೀರಾದ ಪೋಸ್ಟರ್ ಹೇಳುತ್ತಿದೆ.</p>.<p>ಡಾಲಿ, ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಮೊದಲಾದ ಚಿತ್ರಕ್ಕೆ ಸಂಭಾಷಣೆ ರಚಿಸಿದ್ದ ವೇಣು ಹಸ್ರಾಳಿ ಸಂಭಾಷಣೆ ಬರೆದಿದ್ದಾರೆ. ಮುಂದಿನ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಬೆಂಗಳೂರು ಸೇರಿದಂತೆ ದೇಶದ ಬೇರೆ ಬೇರೆ ಜಾಗಗಳಲ್ಲಿ ಚಿತ್ರೀಕರಣ ನಡೆಯಲಿದೆ. ಇದೊಂದು ಪ್ರಯಾಣದ ಕಥೆ ಎಂದು ಚಿತ್ರತಂಡ ಹೇಳಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮಲಿ, ಅಗ್ನಿಸಾಕ್ಷಿ, ನಾಗಿಣಿಯಂತಹ ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸಿದ್ದ ಹಯವದನ್ ಸಿನಿಮಾದತ್ತ ಹೊರಳಿದ್ದಾರೆ. ಚಿತ್ರದ ಶೀರ್ಷಿಕೆಯೊಂದಿಗೆ ಮೊದಲ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಶೀರ್ಷಿಕೆ. ‘ಕಂಬ್ಳಿಹುಳ’ ಚಿತ್ರದಲ್ಲಿ ನಾಯಕನಾಗಿದ್ದ ಅಂಜನ್ ನಾಗೇಂದ್ರ ಈ ಚಿತ್ರದ ನಾಯಕ. ಪವನ್ ಶಿಮಿಕೇರಿ ಮತ್ತು ಸಿಂಧು ಹಯವದನ್ ಚಿತ್ರದ ನಿರ್ಮಾಪಕರು. ಶಿವಪ್ರಸಾದ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.</p>.<p>‘ತಂದೆ ಮಗನ ಜನರೇಷನ್ ಗ್ಯಾಪ್ನ ಗುದ್ದಾಟ. ನವೀರಾದ ಪ್ರೇಮಕಥೆ’ ಎಂದು ಹಯವದನ್ ತಮ್ಮ ಚಿತ್ರದ ಕುರಿತು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಏನನ್ನೋ ಹುಡುಕಿಕೊಂಡು ಬುದ್ಧ ಗಯಾದತ್ತ ಹೋಗುವ ಹುಡುಗನ ಕಥೆ ಎಂಬುದನ್ನು ನವೀರಾದ ಪೋಸ್ಟರ್ ಹೇಳುತ್ತಿದೆ.</p>.<p>ಡಾಲಿ, ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಮೊದಲಾದ ಚಿತ್ರಕ್ಕೆ ಸಂಭಾಷಣೆ ರಚಿಸಿದ್ದ ವೇಣು ಹಸ್ರಾಳಿ ಸಂಭಾಷಣೆ ಬರೆದಿದ್ದಾರೆ. ಮುಂದಿನ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಬೆಂಗಳೂರು ಸೇರಿದಂತೆ ದೇಶದ ಬೇರೆ ಬೇರೆ ಜಾಗಗಳಲ್ಲಿ ಚಿತ್ರೀಕರಣ ನಡೆಯಲಿದೆ. ಇದೊಂದು ಪ್ರಯಾಣದ ಕಥೆ ಎಂದು ಚಿತ್ರತಂಡ ಹೇಳಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>